ಸೋಂಕಿತ ವ್ಯಕ್ತಿಗೆ ಚಕಿತ್ಸೆ ನಿರಾಕರಣೆ; 9 ಆಸ್ಪತ್ರೆಗಳಿಗೆ ಆರೋಗ್ಯ ಇಲಾಖೆಯಿಂದ ಶೋಕಾಸ್ ನೋಟಿಸ್
ಬೆಂಗಳೂರು, ಜು 1: ಕೊರೋನಾ ಸೋಂಕಿತ ವ್ಯಕ್ತಿಯೋರ್ವರನ್ನು ದಾಖಲು ಮಾಡಿಕೊಂಡು ಚಿಕಿತ್ಸೆ ನೀಡಲು ನಿರಾಕರಿಸಿದ 9 ಆಸ್ಪತ್ರೆಗಳಿಗೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಆಯುಕ್ತಾಲಯ ಶೋಕಾಸ್ ನೋಟಿಸ್ ಜಾರಿ ಮಾಡಿದೆ. 52 ವರ್ಷದ ಭಾವರ್ಲಾಲ್ ಸುಜನಿ ಎಂಬ ರೋಗಿಯೊಬ್ಬರು ಚಿಕಿತ್ಸೆಗಾಗಿ 18 ಆಸ್ಪತ್ರೆಗಳಿಗೆ ಅಲೆದಾಡಿದ್ದರೂ, ಯಾವೊಂದು ಆಸ್ಪತ್ರೆಯಲ್ಲೂ ಚಿಕಿತ್ಸೆ ದೊರಕದೆ ಮೃತಪಟ್ಟಿದ್ದಾರೆ. ಅವರಲ್ಲಿ ಜ್ವರದ ಲಕ್ಷಣಗಳು ಕಂಡುಬಂದಿದ್ದರಿಂದ ಪುತ್ರ ವಿಕ್ರಮ್ ಜೈನ್ ಮತ್ತು ಸಂಬಂಧಿ ದಿನೇಶ್ ಅವರನ್ನು ಜೂ. 30ರಂದು ಆಸ್ಪತ್ರೆಗೆ ಕರೆದೊಯ್ದಿದ್ದರು. ಆದರೆ, ಯಾವುದೇ ಆಸ್ಪತ್ರೆಗಳು ಹಾಸಿಗೆ, ವೆಂಟಿಲೆಟರ್ಗಳು ಲಭ್ಯವಿಲ್ಲ ಎಂದು ಕಾರಣ ನೀಡಿ ದಾಖಲು ಮಾಡಿಕೊಂಡಿರಲಿಲ್ಲ.
ಬೈಲಹೊಂಗಲದಲ್ಲಿ ಮಳೆಯ ಅರ್ಭಟ : ನದಿಯಂತಾದ ರಸ್ತೆಗಳು, ನೀರಿನ ಸೆಳೆತಕ್ಕೆ ಸಿಲುಕಿದ ದ್ವಿಚಕ್ರ ವಾಹನಗಳು
ಕನ್ನಡಪರ ನಿರ್ಣಯಕ್ಕೆ ಹಿಂದೇಟು : ಪಾಲಿಕೆಯಲ್ಲಿ ನಿರ್ಣಯ ಮಂಡಿಸಲು ಮುಂದಾದ ಶಾಸಕ ಸೇಠ್
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ 