ಅಂಕಲಿ ಸುತ್ತಮುತ್ತ ಆರೋಗ್ಯ ಸೇವೆ ಬಲಪಡಿಸಲಾಗುವುದು: ಡಾ. ಎನ್.ಎ. ಮಗದುಮ್ಮ
Healthcare services in and around Ankali will be strengthened: Dr. N.A. Magadum
ಲೋಕದರ್ಶನ ವರದಿ
ಮಾಂಜರಿ, ಆ.30: ಅಂಕಲಿ ಹಾಗೂ ಸುತ್ತಮುತ್ತಲಿನ ಗ್ರಾಮೀಣ ಪ್ರದೇಶಗಳಿಗೆ ಆರೋಗ್ಯ ಸೇವೆ ತಲುಪಿಸುವ ಕಾರ್ಯವನ್ನು ಶೀಘ್ರದಲ್ಲೇ ಮತ್ತಷ್ಟು ಬಲಪಡಿಸಲಾಗುವುದು ಎಂದು ಗೋಮಟೇಶ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ಎನ್.ಎ. ಮಗದುಮ್ಮ ಹೇಳಿದರು.
ಅವರು ಭಾನುವಾರ ಸಮೀಪದ ಅಂಕಲಿ ಗ್ರಾಮದಲ್ಲಿರುವ ಡಾ. ಎನ್.ಎ. ಮಗದುಮ್ಮ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಆಯುಷ್ಮಾನ್ ಕರ್ನಾಟಕ ಯೋಜನೆ ಉದ್ಘಾಟಿಸಿ ಮಾತನಾಡಿದರು.
ಆಯುಷ್ಮಾನ್ ಕರ್ನಾಟಕ ಯೋಜನೆಯು ಆರ್ಥಿಕ ತೊಂದರೆ ಎದುರಿಸುತ್ತಿರುವ ಬಡ ಹಾಗೂ ಅರ್ಹ ರೋಗಿಗಳಿಗೆ ಸುಲಭವಾಗಿ ಗುಣಮಟ್ಟದ ಆರೋಗ್ಯ ಸೇವೆ ದೊರೆಯುವಂತೆ ಮಾಡುವ ಉದ್ದೇಶ ಹೊಂದಿದೆ. ಬಡವರ ಆರೋಗ್ಯ ರಕ್ಷಣೆಗೆ ಈ ಯೋಜನೆ ಅತ್ಯಂತ ಪ್ರಯೋಜನಕಾರಿಯಾಗಿದೆ ಎಂದು ಅವರು ಹೇಳಿದರು.
ರಾಜ್ಯ ಸರ್ಕಾರದ ಈ ಯೋಜನೆಯಡಿ ಅರ್ಹ ಫಲಾನುಭವಿಗಳು ಡಾ. ಎನ್.ಎ. ಮಗದುಮ್ಮ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಚಿಕಿತ್ಸೆ ಪಡೆಯಬಹುದಾಗಿದೆ. 100 ಹಾಸಿಗೆಗಳ ಮಾನ್ಯತೆ ಪಡೆದಿರುವ ಆಸ್ಪತ್ರೆಯಲ್ಲಿ ಯೋಜನೆಯಡಿ ಸುಧಾರಿತ ಆರೋಗ್ಯ ಸೇವೆ ಹಾಗೂ ತಜ್ಞ ವೈದ್ಯಕೀಯ ಸೇವೆಗಳನ್ನು ಒದಗಿಸಲಾಗುವುದು ಎಂದು ತಿಳಿಸಿದರು.
ಯೋಜನೆಯಡಿ ಮೂಳೆ ಚಿಕಿತ್ಸೆ, ಜನರಲ್ ಸರ್ಜರಿ, ಪ್ರಸೂತಿ ಮತ್ತು ಸ್ತ್ರೀರೋಗ ಶಾಸ್ತ್ರ, ಸಾಮಾನ್ಯ ಶಸ್ತ್ರಚಿಕಿತ್ಸೆ ಹಾಗೂ ಸಾಮಾನ್ಯ ಓಷಧೋಪಚಾರ ಸೇರಿದಂತೆ ವಿವಿಧ ವೈದ್ಯಕೀಯ ಸೇವೆಗಳು ಲಭ್ಯವಿರಲಿವೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಡಾ. ಪ್ರಸನ್ನ ಸವಣೂರ, ಡಾ. ರಾಮಗೌಡ ಪಾಟೀಲ, ಡಾ. ಸುಧೀರ ಕೋಳಿ, ಡಾ. ಹೇಮಂತ ಪಾಟೀಲ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 