ಮುಂಬೈ ಕಾರ್ಖಾನೆಯಲ್ಲಿ ಭಾರಿ ಬೆಂಕಿ ದುರಂತ: ಇಬ್ಬರು ಸಾವು
ಮುಂಬೈ,
ಡಿ28, ನಗರದ ಘಾಟ್ಕೋಪರ್ ನ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಮಹಿಳೆಯೊಬ್ಬರು
ಸೇರಿದಂತೆ ಇಬ್ಬರು ಮೃತಪಟ್ಟಿರುವುದಾಗಿ ವರದಿಯೊಂದು ಶನಿವಾರ ತಿಳಿಸಿದೆ. ಕಳೆದ ಮಧ್ಯರಾತ್ರಿ ದುರಂತ
ಸಂಭವಿಸಿದ್ದು, ಮಾಹಿತಿ ತಲುಪಿದ ತಕ್ಷಣ ಸುಮಾರು 15 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು
ನಂದಿಸಿವೆ. ಬೆಂಕಿಯ ತೀವ್ರ ಸ್ವರೂಪದ್ದಾಗಿದ್ದು,
ಜ್ವಾಲೆಗಳ ತೀವ್ರತೆ ನಾಲ್ಕರ ಮಟ್ಟದಲ್ಲಿತ್ತು ಎಂದು ಅಗ್ನಿಶಾಮಕ ದಳ ಸಿಬ್ಬಂದಿ ತಿಳಿಸಿದ್ದಾರೆ. ದುರಂತದಲ್ಲಿ
ಗಾಯಗೊಂಡ ಇಬ್ಬರನ್ನು ಹೊರತುಪಡಿಸಿ ಮತ್ತೊಬ್ಬ ವ್ಯಕ್ತಿ ನಾಪತ್ತೆಯಾಗಿದ್ದಾರೆ. ವ್ಯಕ್ತಿಯ ಪತ್ತೆಯ
ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಬೆಂಕಿಗೆ ಕಾರಣವನ್ನು ತಿಳಿಯಲು
ಸಂಬಂಧಿಸಿದ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ದೆಹಲಿಯಲ್ಲಿ ಕೆಲ ದಿನಗಳ ಹಿಂದೆ ಪ್ರತ್ಯೇಕ
ಕಾರ್ಖಾನೆಗಳಲ್ಲಿ ನಡೆದ ಪ್ರತ್ಯೇಕ ಬೆಂಕಿ ದುರಂತಗಳಲ್ಲಿ ಹತ್ತಾರು ಮಂದಿ ಸಾವನ್ನಪ್ಪಿದ್ದನ್ನು ಇಲ್ಲಿ
ಗಮನಿಸಬಹುದಾಗಿದೆ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 