ರಾಜ್ಯದ ಕರಾವಳಿ, ಮಲೆನಾಡು ಭಾಗದಲ್ಲಿ ಭಾರೀ ಮಳೆ ಎಚ್ಚರಿಕೆ
ಬೆಂಗಳೂರು, ಆ.25- ಮುಂದಿನ ಎರಡು ದಿನಗಳ ನಂತರ ರಾಜ್ಯದ ಕರಾವಳಿ, ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬಂಗಾಳಕೊಲ್ಲಿಯಲ್ಲಿ ದಟ್ಟ ಮೋಡಗಳು ಆವರಿಸುತ್ತಿದ್ದು, ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆ ಇರುವುದರಿಂದ 27ರಿಂದ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಮಳೆಯಾಗುವ ನಿರೀಕ್ಷೆ ಇದೆ ಎಂದು ಕನರ್ಾಟಕ ರಾಜ್ಯ ನೈಸಗರ್ಿಕ ವಿಕೋಪ ಉಸ್ತುವಾರಿ ಕೇಂದ್ರ ಎಚ್ಚರಿಕೆ ನೀಡಿದೆ.
ಕಳೆದ ವಾರ ರಾಜ್ಯದಲ್ಲಿ ಸುರಿದ ಭಾರೀ ಮಳೆಗೆ ಕೊಡಗು ಜಿಲ್ಲೆಯಲ್ಲಿ ಪ್ರವಾಹ, ಗುಡ್ಡ ಕುಸಿತ ಉಂಟಾಗಿ ಆಸ್ತಿ-ಪಾಸ್ತಿ, ಸಾವು-ನೋವು ಸಂಭವಿಸಿ ಪರಿಹಾರ ಕಾರ್ಯಗಳು ಇಂದಿಗೂ ಮುಂದುವರಿದಿವೆ.
ದಕ್ಷಿಣ ಕನ್ನಡ, ಮಲೆನಾಡು, ಕರಾವಳಿ ಭಾಗದಲ್ಲೂ ಕೂಡ ಮಳೆ ಅನಾಹುತ ಸಂಭವಿಸಿತ್ತು. ರಸ್ತೆ, ಸೇತುವೆಗಳು ಹಾನಿಯಾಗಿದ್ದವು. ಈಗ ಮತ್ತೆ ಮಳೆ ಬಂದರೆ ಮತ್ತಷ್ಟು ಸಮಸ್ಯೆಗಳು ಉಲ್ಬಣವಾಗುವ ಸಾಧ್ಯತೆ ಇದೆ. ಕಳೆದ ಮೂರು ದಿನಗಳಿಂದ ಕೊಂಚ ಬಿಡುವು ನೀಡಿದ್ದ ಮಳೆ ಶುಕ್ರವಾರ ರಾಜ್ಯದ ಹಲವು ಭಾಗಗಳಲ್ಲಿ ಸುರಿಯಿತು.
ಬೆಂಗಳೂರು, ಕರಾವಳಿ ಘಟ್ಟ ಪ್ರದೇಶ ಸೇರಿದಂತೆ ಹಲವೆಡೆ ಮಳೆಯಾಗಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿಯುವ ಸಾಧ್ಯತೆ ಇರುವುದರಿಂದ ಎರಡು-ಮೂರು ದಿನಗಳಲ್ಲಿ ರಾಜ್ಯದ ಹಲವೆಡೆ ಸಾಧಾರಣ ಮಳೆ. ಕರಾವಳಿ, ಮಲೆನಾಡು ಭಾಗಗಳಲ್ಲಿ ಹೆಚ್ಚಿನ ಮಳೆಯಾಗಲಿದೆ ಎಂದು ನೈಸಗರ್ಿಕ ವಿಕೋಪ ಕೇಂದ್ರ ಎಚ್ಚರಿಕೆ ನೀಡಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 