ಹಿಮಾಚಲ ಪ್ರದೇಶದಲ್ಲಿ ಮಹಾ ಚಂಡಮಾರುತದಿಂದ ಮಂಜು, ಮಳೆ
ಶಿಮ್ಲಾ, ನ 7: ಮಹಾ ಚಂಡಮಾರುತ ಹಿಮಾಚಲ ಪ್ರದೇಶದ ಮೇಲೆ ಪ್ರಭಾವ ಬೀರುತ್ತಿದ್ದು, ರಾಜ್ಯದ 8 ಜಿಲ್ಲೆಗಳು ತೀವ್ರ ಮಂಜು ಇಲ್ಲವೇ ಮಳೆಯಿಂದ ಬಾಧಿತವಾಗಿವೆ. ಇದರಿಂದ ರಾಜ್ಯದಲ್ಲಿ ಪೂರ್ವ ಚಳಿಗಾಲದ ವಾತಾವರಣ ನಿರ್ಮಾಣವಾಗಿದೆ. ಆದರೆ, ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಸಜ್ಜಾಗಿರುವ ಇಲ್ಲಿನ ಧರ್ಮಶಾಲಾದಲ್ಲಿ ಮಾತ್ರ ಒಣ ಹವೆಯಿದೆ. ಇಲ್ಲಿ ನಡೆಯಲಿರುವ ಎರಡು ದಿನಗಳ ಸಮಾವೇಶವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿ, 200ಕ್ಕೂ ಹೆಚ್ಚು ವಿದೇಶಿ ಉದ್ಯಮಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಉಳಿದಂತೆ ಕಿಲೋಂಗ್ ಜಿಲ್ಲೆಯ ಲಹೌಲ್ ಸ್ಪಿತಿಯಲ್ಲಿ ಒಂದು ಸೆಂಟಿಮೀಟರ್ ಮಂಜು ಬಿದ್ದಿರುವುದು ದಾಖಲಾಗಿದೆ. ಮನಾಲಿಯ ಪ್ರವಾಸಿ ರೆಸಾರ್ಟ್ 11 ಮಿಮೀ, ಶಿಮ್ಲಾ 5.6 ಮಿಮೀ ಮಳೆಯಾಗಿದೆ. ರಾಜ್ಯದ ಪ್ರಸಕ್ತ ಹವೆಯನ್ನು ಜೋಳ, ಬಾರ್ಲ್, ಕಾಳುಗಳಂತಹ ಬೆಳೆಗಳಿಗೆ ಉತ್ತಮವಾಗಿವೆ.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 