ರಾಣೇಬೆನ್ನೂರಿನಾದ್ಯಂತ ಭಾರಿ ಮಳೆ
ಲೋಕದರ್ಶನ ವರದಿ
ರಾಣೇಬೆನ್ನೂರು.23: ನಗರ ಸೇರಿದಂತೆ ಗ್ರಾಮೀಣ ಪ್ರದೇಶದ ಬಹುತೇಕ ಭಾಗಗಳಲ್ಲಿ ಗುರುವಾರ ಗುಡುಗು-ಶಿಡಿಲು ಸಹಿತ ಭಾರಿ ಮಳೆ ಸುರಿದಿದೆ. ಸುಮಾರು ಮುಕ್ಕಾಲು ಗಂಟೆಗಳ ಕಾಲ ರಭಸದ ಮಳೆಯಾಗಿದೆ. ಇದರಿಂದ ನಗರದ ಚರಂಡಿ, ಗಟಾರ, ಮತ್ತಿತರ ತಗ್ಗು ಪ್ರದೇಶದಲ್ಲಿ ನೀರು ತುಂಬಿ ಹರಿಯಿತು. ತಾಲೂಕಿನ ಗಂಗಾಪುರದಲ್ಲಿ ಶಿಡಿಲಿಗೆ ಒಂದು ಎತ್ತು ಸಾವನ್ನಪ್ಪಿದೆ. ಇದನ್ನು ಹೊರತು ಪಡಿಸಿದರೆ ಎಲ್ಲಿಯೂ ಸಹ ಪ್ರಾಣ ಹಾಗೂ ಆಸ್ತಿ ಹಾನಿಯ ಬಗ್ಗೆ ವರದಿಯಾಗಿಲ್ಲ. ಭಾರಿ ಪ್ರಮಾಣದ ಗುಡುಗು ಸಿಡಿಲಿನಿಂದ ನಾಗರೀಕರು ಭಯ ಪಡುವಂತಾಯಿತು.
ಈ ಮಧ್ಯ ಕೆಲಹೊತ್ತು ವಿದ್ಯುತ್ ಸ್ಥಗಿತಗೊಂಡು ಜನರು ಪರದಾಡುವಂತಾಯಿತು. ವರ್ಷದ ಮೊದಲ ವರ್ಷಧಾರೆ ಇದಾಗಿದ್ದು, ಜನರು ಮಳೆಯಿಂದಾಗಿ ಸಂತಸಪಟ್ಟರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 