ರಾಣೇಬೆನ್ನೂರಿನಾದ್ಯಂತ ಭಾರಿ ಮಳೆ
ಲೋಕದರ್ಶನ ವರದಿ
ರಾಣೇಬೆನ್ನೂರು.23: ನಗರ ಸೇರಿದಂತೆ ಗ್ರಾಮೀಣ ಪ್ರದೇಶದ ಬಹುತೇಕ ಭಾಗಗಳಲ್ಲಿ ಗುರುವಾರ ಗುಡುಗು-ಶಿಡಿಲು ಸಹಿತ ಭಾರಿ ಮಳೆ ಸುರಿದಿದೆ. ಸುಮಾರು ಮುಕ್ಕಾಲು ಗಂಟೆಗಳ ಕಾಲ ರಭಸದ ಮಳೆಯಾಗಿದೆ. ಇದರಿಂದ ನಗರದ ಚರಂಡಿ, ಗಟಾರ, ಮತ್ತಿತರ ತಗ್ಗು ಪ್ರದೇಶದಲ್ಲಿ ನೀರು ತುಂಬಿ ಹರಿಯಿತು. ತಾಲೂಕಿನ ಗಂಗಾಪುರದಲ್ಲಿ ಶಿಡಿಲಿಗೆ ಒಂದು ಎತ್ತು ಸಾವನ್ನಪ್ಪಿದೆ. ಇದನ್ನು ಹೊರತು ಪಡಿಸಿದರೆ ಎಲ್ಲಿಯೂ ಸಹ ಪ್ರಾಣ ಹಾಗೂ ಆಸ್ತಿ ಹಾನಿಯ ಬಗ್ಗೆ ವರದಿಯಾಗಿಲ್ಲ. ಭಾರಿ ಪ್ರಮಾಣದ ಗುಡುಗು ಸಿಡಿಲಿನಿಂದ ನಾಗರೀಕರು ಭಯ ಪಡುವಂತಾಯಿತು.
ಈ ಮಧ್ಯ ಕೆಲಹೊತ್ತು ವಿದ್ಯುತ್ ಸ್ಥಗಿತಗೊಂಡು ಜನರು ಪರದಾಡುವಂತಾಯಿತು. ವರ್ಷದ ಮೊದಲ ವರ್ಷಧಾರೆ ಇದಾಗಿದ್ದು, ಜನರು ಮಳೆಯಿಂದಾಗಿ ಸಂತಸಪಟ್ಟರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 