ಕಾಗವಾಡ ತಾಲೂಕಿನಾದ್ಯಂತ ಭಾರಿ ಮಳೆ
Heavy rains across Kagwad taluk
ಕಾಗವಾಡ 12: ಮುಂಗಾರು ಮಳೆ ಆರಂಭವಾಗಿದ್ದು, ಕಾಗವಾಡ ತಾಲೂಕಿನಾದ್ಯಂತ ಬುಧವಾರ ದಿ. 12 ರಂದು ಮಧ್ಯಾಹ್ನ 2 ಗಂಟೆಯಿಂದ 5 ಗಂಟೆಯ ವರೆಗೆ ಭಾರಿ ಮಳೆಯಾಗಿದ್ದು, ಮಳೆಯಿಂದಾಗಿ ರಸ್ತೆ ಮೇಲೆ ನೀರು ಹರಿದು ಬಂದಿರುವುದರಿಂದ ವಾಹನ ಸವಾರರು ಪರದಾಡುವ ಪರಿಸ್ಥಿತಿ ಉಂಟಾಯಿತು. ಸತತ 3 ಗಂಟೆಗಳ ಕಾಲ ಸುರಿದ ಮಳೆಯಿಂದಾಗಿ ಹಳ್ಳಕೊಳ್ಳಗಳು ತುಂಬಿ ಹರಿಯಲಾರಂಭಿಸಿವೆ. ಮಳೆಯ ಜೊತೆಗೆ ಗುಡುಗು ಸಿಡಿಲಿನ ಅಬ್ಬರವೂ ಜೋರಾಗಿದ್ದು, ಇದು ಮುಂಗಾರು ಮಳೆಯೋ ಅಥವಾ ಅಕಾಲಿಕ ಮಳೆಯೋ ತಿಳಿಯದಂತಾಗಿದೆ. ತಾಲೂಕಿನ ಕಾಗವಾಡ, ಶೇಡಬಾಳ, ಉಗಾರ, ಐನಾಪೂರ, ಮೋಳೆ, ಕವಲಗುಡ್ಡ, ಶಿರಗುಪ್ಪಿ, ಜುಗೂಳ ಗ್ರಾಮದಲ್ಲಿಯೂ ಮಳೆ ಜೋರಾಗಿತ್ತು.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 