ಕಾಗವಾಡ ತಾಲೂಕಿನಾದ್ಯಂತ ಭಾರಿ ಮಳೆ
Heavy rains across Kagwad taluk
ಕಾಗವಾಡ 12: ಮುಂಗಾರು ಮಳೆ ಆರಂಭವಾಗಿದ್ದು, ಕಾಗವಾಡ ತಾಲೂಕಿನಾದ್ಯಂತ ಬುಧವಾರ ದಿ. 12 ರಂದು ಮಧ್ಯಾಹ್ನ 2 ಗಂಟೆಯಿಂದ 5 ಗಂಟೆಯ ವರೆಗೆ ಭಾರಿ ಮಳೆಯಾಗಿದ್ದು, ಮಳೆಯಿಂದಾಗಿ ರಸ್ತೆ ಮೇಲೆ ನೀರು ಹರಿದು ಬಂದಿರುವುದರಿಂದ ವಾಹನ ಸವಾರರು ಪರದಾಡುವ ಪರಿಸ್ಥಿತಿ ಉಂಟಾಯಿತು. ಸತತ 3 ಗಂಟೆಗಳ ಕಾಲ ಸುರಿದ ಮಳೆಯಿಂದಾಗಿ ಹಳ್ಳಕೊಳ್ಳಗಳು ತುಂಬಿ ಹರಿಯಲಾರಂಭಿಸಿವೆ. ಮಳೆಯ ಜೊತೆಗೆ ಗುಡುಗು ಸಿಡಿಲಿನ ಅಬ್ಬರವೂ ಜೋರಾಗಿದ್ದು, ಇದು ಮುಂಗಾರು ಮಳೆಯೋ ಅಥವಾ ಅಕಾಲಿಕ ಮಳೆಯೋ ತಿಳಿಯದಂತಾಗಿದೆ. ತಾಲೂಕಿನ ಕಾಗವಾಡ, ಶೇಡಬಾಳ, ಉಗಾರ, ಐನಾಪೂರ, ಮೋಳೆ, ಕವಲಗುಡ್ಡ, ಶಿರಗುಪ್ಪಿ, ಜುಗೂಳ ಗ್ರಾಮದಲ್ಲಿಯೂ ಮಳೆ ಜೋರಾಗಿತ್ತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 