ಅಸ್ಸಾಂ ನಲ್ಲಿ ಭಾರಿ ಮಳೆ, ಪ್ರವಾಹ ಪರಿಸ್ಥಿತಿ
ಭುವನೇಶ್ವರ್, ಜೂನ್ 28: ಅಸ್ಸಾಂನಲ್ಲಿ ಭಾರಿ ಮಳೆ ಮುಂದುವರಿದಿದ್ದು ಪ್ರವಾಹ ಭೀತಿ ಇದೆ. ಸುಮಾರು ಎರಡು ಲಕ್ಷ 62 ಸಾವಿರ ಜನರು ಪ್ರವಾಹ ಪೀಡಿತ 21 ಜಿಲ್ಲೆಗಳಲ್ಲಿ ವಾಸಿಸುತ್ತಿದ್ದಾರೆ. ಈವರೆಗೆ 18 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಅಲ್ಲದೇ ತುಂಬಿ ಹರಿಯುತ್ತಿರುವ ನೀರು ಬೆಳಗಳಿಗೆ ಭಾರಿ ಹಾನಿ ಉಂಟು ಮಾಡಿದೆ. ರಸ್ತೆ ಮತ್ತು ಸೇತುವೆ, ಕಾಲುವೆಗಳಲ್ಲಿ ನೀರು ಹರಿಯುತ್ತಿದ್ದು ಸಂಚಾರಕ್ಕೆ ಅಡ್ಡಿಯಾಗಿದೆ.ಸುಮಾರು 19 ಸಾವಿರ ಜನರು ತಾತ್ಕಾಲಿಕ ಆಶ್ರಯ ಶಿಬಿರಗಳಲ್ಲಿ ಆಶ್ರಯ ಪಡೆದಿದ್ದಾರೆ. ಸ್ಥಳೀಯ ಆಡಳಿತ ಪ್ರವಾಹದಿಂದ ಬಾಧಿತರಾದವರಿಗೆ ಆಹಾರ ಸಾಮಗ್ರಿಗಳನ್ನು ನೀಡಿದೆ.ಎಲ್ಲ ಪ್ರವಾಹ ಪೀಡಿತರಿಗೆ ನೆರವು ನೀಡುವಂತೆ ಅಸ್ಸಾಂ ಮುಖ್ಯಮಂತ್ರಿ ಸರ್ಬಾನಂದ್ ಸೋನೋವಾಲ್ ಸ್ಥಳೀಯ ಆಡಳಿತಕ್ಕೆ ಸೂಚನೆ ನೀಡಿದ್ದಾರೆ.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 