ಅಸ್ಸಾಂ ನಲ್ಲಿ ಭಾರಿ ಮಳೆ, ಪ್ರವಾಹ ಪರಿಸ್ಥಿತಿ
ಭುವನೇಶ್ವರ್, ಜೂನ್ 28: ಅಸ್ಸಾಂನಲ್ಲಿ ಭಾರಿ ಮಳೆ ಮುಂದುವರಿದಿದ್ದು ಪ್ರವಾಹ ಭೀತಿ ಇದೆ. ಸುಮಾರು ಎರಡು ಲಕ್ಷ 62 ಸಾವಿರ ಜನರು ಪ್ರವಾಹ ಪೀಡಿತ 21 ಜಿಲ್ಲೆಗಳಲ್ಲಿ ವಾಸಿಸುತ್ತಿದ್ದಾರೆ. ಈವರೆಗೆ 18 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಅಲ್ಲದೇ ತುಂಬಿ ಹರಿಯುತ್ತಿರುವ ನೀರು ಬೆಳಗಳಿಗೆ ಭಾರಿ ಹಾನಿ ಉಂಟು ಮಾಡಿದೆ. ರಸ್ತೆ ಮತ್ತು ಸೇತುವೆ, ಕಾಲುವೆಗಳಲ್ಲಿ ನೀರು ಹರಿಯುತ್ತಿದ್ದು ಸಂಚಾರಕ್ಕೆ ಅಡ್ಡಿಯಾಗಿದೆ.ಸುಮಾರು 19 ಸಾವಿರ ಜನರು ತಾತ್ಕಾಲಿಕ ಆಶ್ರಯ ಶಿಬಿರಗಳಲ್ಲಿ ಆಶ್ರಯ ಪಡೆದಿದ್ದಾರೆ. ಸ್ಥಳೀಯ ಆಡಳಿತ ಪ್ರವಾಹದಿಂದ ಬಾಧಿತರಾದವರಿಗೆ ಆಹಾರ ಸಾಮಗ್ರಿಗಳನ್ನು ನೀಡಿದೆ.ಎಲ್ಲ ಪ್ರವಾಹ ಪೀಡಿತರಿಗೆ ನೆರವು ನೀಡುವಂತೆ ಅಸ್ಸಾಂ ಮುಖ್ಯಮಂತ್ರಿ ಸರ್ಬಾನಂದ್ ಸೋನೋವಾಲ್ ಸ್ಥಳೀಯ ಆಡಳಿತಕ್ಕೆ ಸೂಚನೆ ನೀಡಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 