ಅಧಿಕ ರಕ್ತದೊತ್ತಡ ಇತರ ಕಾಯಿಲೆಗಳನ್ನು ಹೆಚ್ಚಿಸುತ್ತದೆ: ಡಾ. ದಯಾನಂದ
High blood pressure increases the risk of other diseases: Dr. Dayanand
ಲೋಕದರ್ಶನ ವರದಿ
ಬೆಳಗಾವಿ 20: ಅಧಿಕ ರಕ್ತದೊತ್ತಡ ಆರೋಗ್ಯಕ್ಕೆ ಗಂಭೀರ ತೊಂದರೆಯನ್ನುಂಟು ಮಾಡುವ ನಿಧಾನ ಕೊಲೆಗಾರನಾಗಿದ್ದು, ಹೃದಯ, ಮೆದುಳು, ಮೂತ್ರಪಿಂಡ ಮತ್ತು ಇತರ ಕಾಯಿಲೆಗಳನ್ನು ಹೆಚ್ಚಿಸುತ್ತದೆ. ಗ್ರಾಮೀಣ ಪ್ರದೇಶಕ್ಕಿಂತ ನಗರ ಪ್ರದೇಶಗಳಲ್ಲಿನ ಜನರು ಹೆಚ್ಚಾಗಿ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದಾರೆ. ಆದರೆ ಗ್ರಾಮೀಣ ಜನರು ಚಿಕಿತ್ಸೆ ಪಡೆಯುವಲ್ಲಿ ಹಿಂದೇಟು ಹಾಕುತ್ತಿದ್ದಾರೆ. ಕಡಿಮೆ ಮತ್ತು ಮಧ್ಯಮ-ಆದಾಯದವರು ತಮಗೆ ರಕ್ತದೊತ್ತಡ ಇದೆ ಎಂಬುದನ್ನೇ ಅರಿತುಕೊಂಡಿಲ್ಲ ಎಂದು ಕೆಎಲ್ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರದ ವೈದ್ಯಕೀಯ ನಿರ್ದೇಶಕರಾದ ಡಾ. (ಕರ್ನಲ್) ಎಂ ದಯಾನಂದ ಅವರು ಹೇಳಿದರು.
ವಿಶ್ವ ಅಧಿಕ ರಕ್ತದೊತ್ತಡ ದಿನಾಚರಣೆ ಅಂಗವಾಗಿ ಕೆಎಲ್ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರದ ಹೃದ್ರೋಗ ವಿಭಾಗವು ಇತ್ತೀಚೆಗೆ ಏರಿ್ಡಸಿದ್ದ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಯುವಕರಲ್ಲಿ ರಕ್ತದೊತ್ತಡ ಕಂಡುಬರುತ್ತಿರುವದು ಅತ್ಯಂತ ಅಪಾಯಕಾರಿ. ಇತ್ತೀಚಿನ ದಿನಗಳಲ್ಲಿ ಆಹಾರ ಪದ್ದತಿ ಕೆಲಸದೊತ್ತಡದಿಂದ ರಕ್ತದೊತ್ತಡವು ಕಂಡು ಬರುತ್ತಿದೆ. ಆದ್ದರಿಂದ ಸರಿಯಾದ ಸಮಯಕ್ಕೆ ತಪಾಸಣೆಗೊಳ್ಪಡದಿದ್ದರೆ, ತೀವ್ರತರವಾದ ಅನಾರೋಗ್ಯಕ್ಕೆ ಕಾರಣವಾಗುತ್ತದೆ. ಇದು ದೇಹದ ವಿವಿಧ ಅಂಗಾಂಗಗಳ ಮೇಲೆ ದುಷ್ಪರಿಣಾಮ ಬೀರುತ್ತದೆ. ಆದ್ದರಿಂದ ಮುಂಜಾಗೃತೆ ವಹಿಸುವದು ಅತ್ಯವಶ್ಯ. ಅಧಿಕ ರಕ್ತದೊತ್ತಡದ ಕುರಿತು ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು.
ವಿಭಾಗ ಮುಖ್ಯಸ್ಥರಾದ ಡಾ. ಸಂಜಯ ಪೋರವಾಲ ಅವರು ಮಾತನಾಡಿ, ಅದಿಕ ರಕ್ತದೊತ್ತಡವು ಯಾವುದೇ ಗುಣಲಕ್ಷಣಗಳನ್ನು ಹೊಂದಿರುವುದಿಲ್ಲ. ಆದರೆ ಇದು ಹೃದಯಾಘಾತ, ಪಾರ್ಶವಾಯು, ಮೂತ್ರಪಿಂಡ ಖಾಯಿಲೆ ಹಾಗೂ ಅಕಾಲಿಕ ಮರಣದ ಅಪಾಯವನ್ನು ಗಮನಾರ್ಹವಾಗಿ ಹೆಚ್ಚಿಸುತ್ತದೆ. ಶೀಘ್ರದಲ್ಲಿಯೇ ಅದನ್ನು ಪತ್ತೆಹಚ್ಚಿ ನಿಯಮಿತ ಚಿಕಿತ್ಸೆ ಹಾಗೂ ಆಹಾರ ಕ್ರಮಗಳನ್ನು ಅನುಸರಿಸಬೇಕು. ಅಧಿಕ ರಕ್ತದೊತ್ತಡಕ್ಕೆ ಚಿಕಿತ್ಸೆ ಪಡೆಯಲು ಜನ ಹಿಂಜರಿಯುತ್ತಿದ್ದಾರೆ. ಆದರೆ ಅವರಿಗೆ ಆರೋಗ್ಯ ಸಮಸ್ಯೆ ಕಂಡು ಬರುವ ಅಪಾಯ ಹೆಚ್ಚಾಗಿರುತ್ತದೆ. ಆದ್ದರಿಂದ ರಕ್ತದೊತ್ತಡವನ್ನು ನಿರ್ಲಕ್ಷಿಸಿದರೆ ಸೂಕ್ತ ಚಿಕಿತ್ಸೆ ಪಡೆಯಬೇಕು ಎಂದು ಕರೆ ನೀಡಿದರು. ಸಮಾರಂಭದಲ್ಲಿ ಹಿರಿಯ ಹೃದ್ರೋಗ ತಜ್ಞವೈದ್ಯರಾದ ಡಾ. ಸುರೇಶ ಪಟ್ಟೇದ, ಡಾ. ಸಮೀರ ಅಂಬರ, ಡಾ. ವಿಜಯಾನಂದ ಮೆಟಗುಡಮಠ, ಡಾ. ಪ್ರಸಾದ ಎಂ. ಆರ್. ಡಾ. ಸುಹಾಸಿನಿ ಅಗರ್ಥಾ, ಡಾ. ವಿಶ್ವನಾಥ ಹೆಸರೂರ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 