ಕಾಶ್ಮೀರ ಕುರಿತು ಕೇಂದ್ರ ಗೃಹ ಸಚಿವಾಲಯದಿಂದ ಉನ್ನತ ಮಟ್ಟದ ಸಭೆ
ನವದೆಹಲಿ, ಆಗಸ್ಟ್ 27 ಜಮ್ಮು ಕಾಶ್ಮೀರ ಕುರಿತಂತೆ ಕೇಂದ್ರ ಗೃಹ ಸಚಿವಾಲಯ ದೆಹಲಿಯಲ್ಲಿಂದು ಉನ್ನತ ಮಟ್ಟದ ಸಭೆ ನಡೆಸಲಿದೆ. ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲಾ ಅವರ ಅಧ್ಯಕ್ಷತೆಯಲ್ಲಿ ಕಾಶ್ಮೀರ ಕುರಿತು ನಡೆಯಲಿರುವ ಮೊದಲ ಸಭೆ ಇದಾಗಲಿದೆ. ಇದೊಂದು ಅಂತರ ಸಚಿವಾಲಯಗಳ ಸಭೆಯಾಗಿದ್ದು, ವಿವಿಧ ಸಚಿವಾಲಯಗಳ ಕಾರ್ಯದರ್ಶಿಗಳು ಈ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಗೃಹ ಸಚಿವಾಲಯದ ಅಧಿಕಾರಿ ತಿಳಿಸಿದ್ದಾರೆ. ಕೇಂದ್ರ ಸರ್ಕಾರ ಸಂವಿಧಾನದ 370ನೇ ವಿಧಿ ರದ್ದುಪಡಿಸಿ, ಜಮ್ಮು ಕಾಶ್ಮೀರ ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳನ್ನಾಗಿ ವಿಭಜಿಸಿದ ನಂತರ ಭದ್ರತೆ ಹಾಗೂ ಇತರ ಅಭಿವೃದ್ದಿ ಕಾರ್ಯಕ್ರಮಗಳ ಕುರಿತು ಪರಾಮರ್ಶಿ ನಡೆಸಲಿರುವ ಮೊದಲ ಉನ್ನತಮಟ್ಟದ ಸಭೆ ಇದಾಗಲಿದೆ. ರಾಜ್ಯದಲ್ಲಿ ಮೊಬೈಲ್ ನೆಟ್ ವರ್ಕ್ ಪುನರಾಂಭಗೊಳಿಸುವುದು ಪ್ರಮುಖ ವಿಷಯವಾಗಿದ್ದು, ಸಭೆಯಲ್ಲಿ ಈ ಅಂಶವೂ ಚರ್ಚೆಗೆ ಬರುವ ನಿರೀಕ್ಷೆಯಿದೆ ಅಧಿಕಾರಿ ಮೂಲಗಳು ಹೇಳಿವೆ 370 ವಿಧಿ ರದ್ದುಪಡಿಸಿದ ನಂತರ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಆಡಳಿತ, ರಾಜ್ಯದಲ್ಲಿ ಹಂತ ಹಂತವಾಗಿ ನಿರ್ಬಂಧಗಳನ್ನು ಹಿಂಪಡೆಯುವ ಮೂಲಕ ಸಹಜ ಪರಿಸ್ಥಿತಿ ಮೂಡಿಸಲು ಕ್ರಮ ಕೈಗೊಳ್ಳುತ್ತಿವೆ. ಕಣಿವೆ ರಾಜ್ಯದಲ್ಲಿ ಶಾಲೆಗಳು ಹಾಗೂ ಸರ್ಕಾರಿ ಕಚೇರಿಗಳು ಈಗಾಗಲೇ ಪುನರಾಂಭಗೊಂಡಿದ್ದು, ಶಾಲೆಗಳಲ್ಲಿ ಮಕ್ಕಳ ಹಾಗೂ ಕಚೇರಿಗಳ ಸಿಬ್ಬಂದಿಯ ಹಾಜರಾತಿ ಉತ್ಸಾಹದಾಯಕವಾಗಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 