ಹೊಳಗುಂದಿ : ಯೂರಿಯಾ ಗೊಬ್ಬರಕ್ಕೆ ರೈತರ ಪರದಾಟ
Holagundi: Farmers' scramble for urea fertilizer
ಲೋಕದರ್ಶನ ವರದಿ
ಹೂವಿನಹಡಗಲಿ 29: ಮುಂಗಾರು ಬಿತ್ತನೆಗೆ ರೈತರು ಮುಂದಾಗಿದ್ದು .ಕೃತಕ ಅಭಾವದಿಂದ ಮುಂಗಡವಾಗಿ ರೈತರು ಯೂರಿಯಾ ಸಂಗ್ರಹ ಮಾಡುತ್ತಿದ್ದಾರೆ.ತಾಲ್ಲೂಕಿನ ಹೊಳಗುಂದಿ ಗ್ರಾಮದಲ್ಲಿ ಶುಕ್ರವಾರ ಸೊಸೈಟಿ 650 ಚೀಲ ಬಂದಿದ್ದು,ಚೀಲಕ್ಕೆ ? 300 ರೂ.ಕೊಡಲಾಗಿದೆ. ರೈತರು ಯೂರಿಯಾ ಗೊಬ್ಬರಕ್ಕಾಗಿ ಪರದಾಡಿದರು.ಸರ್ವರ್ ಸಮಸ್ಯೆ ಯಿಂದ ಸ್ವಲ್ಪ ಗಲಾಟೆ ಯಿಂದ ಗೊಬ್ಬರ ವಿತರಿಸಲು ನಿಲ್ಲಿಸಲಾಗಿದೆ ನಂತರ ಸ್ಥಳಕ್ಕೆ ಕೃಷಿ ಸಹಾಯಕ ನಿರ್ದೇಶಕ ಕೆ.ಟಿ.ಮಂಜುನಾಥ ಮಾತನಾಡಿ ಪಹಣಿ, ಆಧಾರ ಕಾರ್ಡ್ ತೆಗೆದುಕೊಂಡು ವಿತರಿಸಲು ಹೇಳಿದರು.ಇದೇ ವೇಳೆ ಸೊಸೈಟಿ ಅದ್ಯಕ್ಷ ಕಾತ್ರಿಕಿ ಕರಿಬಸವರಾಜ, ಕಾರ್ಯದರ್ಶಿ ವೀರೇಶ, ಗ್ರಾ.ಪಂ.ಮಾಜಿ ಸದಸ್ಯ ಸ್ವರೂಪನಾಂದ ಇದ್ದರು.ಕೃಷಿ ಇಲಾಖೆ ಸಹಕಾರ ಸಂಘಗಳ ಮೂಲಕ ಯೂರಿಯಾ ಪೂರೈಸುತ್ತಿದೆ. ಆದರೆ ಗೊಬ್ಬರವನ್ನು ಯಾರಿಗೆ ಎಷ್ಟು ಪ್ರಮಾಣದಲ್ಲಿ ವಿತರಿಸಲಾಗಿದೆ ಎಂಬ ಬಗ್ಗೆ ಕೃಷಿ ಇಲಾಖೆ ಮುತುವರ್ಜಿ ವಹಿಸಿಲ್ಲ.
ಹಾಗಾಗಿ ರೈತರು ಗೊಬ್ಬರಕ್ಕಾಗಿ ಪರದಾಡುತ್ತಿದ್ದರೆ ಜತೆಗೆ ತಾಲೂಕಿನ ನಾನಾ ಸಹಕಾರ ಸಂಘಗಳಲ್ಲಿನ ಯೂರಿಯಾ ಪ್ರಭಾವಿ ವ್ಯಕ್ತಿಗಳ ಪಾಲಾಗುತ್ತಿದೆ ಎಂಬುದು ದೂರುಗಳು ಕೇಳಿ ಬರುತ್ತಿದೆ. ಖಾಸಗಿ ಮಾರಾಟಗಾರರ ಬಳಿ ಹೋದರೆ ಗೊಬ್ಬರ ಇಲ್ಲ ಎನ್ನುತ್ತಿದ್ದಾರೆ. ಸಂಗ್ರಹಿಸಿ ಇಟ್ಟುಕೊಂಡಿರುವವರು ಬೇರೆ ಕಡೆಯಿಂದ ತರಿಸಿದ್ದೇವೆ ಎಂದು ಹೇಳಿ ರೈತರಿಂದ ಹೆಚ್ಚಿನ ದರ ವಸೂಲಿ ಮಾಡುತ್ತಿದ್ದಾರೆ. ಇಂಥ ಸಂದರ್ಭದಲ್ಲಿ ರೈತರ ನೆರವಿಗೆ ಬಾರದ ಕೃಷಿ ಇಲಾಖೆ ಮತ್ತು ಅದರ ಅಧಿಕಾರಿಗಳು ಇದ್ದರೂ ಯಾರಿಗೆ ಪ್ರಯೋಜನ ಎಂದು ರೈತರು ಅಸಮಾಧಾನ ತೋಡಿಕೊಂಡರು.ವರ್ತಕರು ಪರಿಸ್ಥಿತಿಯ ದುರ್ಲಾಭ ಪಡೆಯುತ್ತಿದ್ದರೂ ಕೃಷಿ ಇಲಾಖೆ ಅಧಿಕಾರಿಗಳು ಕ್ರಮಕ್ಕೆ ಮುಂದಾಗಿಲ್ಲ. ಈ ವಿಷಯವನ್ನು ಸಹಾಯಕ ನಿರ್ದೇಶಕರು, ಕೃಷಿ ಅಧಿಕಾರಿಗಳ ಗಮನಕ್ಕೆ ತಂದರೂ ನಿರ್ಲಕ್ಷ್ಯವಹಿಸಿದ್ದಾರೆ ಎಂಬ ದೂರುಗಳು ರೈತರಿಂದ ಕೇಳಿಬಂದಿವೆ.
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ
ಬಿಗಿ ಭದ್ರತೆಯ ನಡುವೆ 6,200ಕ್ಕೂ ಹೆಚ್ಚು ಅಮರನಾಥ ಯಾತ್ರಿಕರು ಜಮ್ಮುವಿನಿಂದ ಪ್ರಯಾಣ ಬೆಳೆಸಿದರು 