ರಮಜಾನ್ ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡ ಜನ ಪ್ರತಿನಿಧಿ ಮುಖಂಡರಿಗೆ ಸನ್ಮಾನ
Honors to public representatives who participated in Ramadan mass prayers
ಕೊಪ್ಪಳ 22: ಇಸ್ಲಾಂ ಧರ್ಮದ ಪವಿತ್ರ ರಂಜಾನ್ ಮಾಸಾಚರಣೆ ಪೂರ್ಣಗೊಂಡ ಬಳಿಕ ಜರುಗಿದ ಈದುಲ್ ಫಿತರ್ ಹಬ್ಬದ ಸಂದರ್ಭ ದಲ್ಲಿ ಕೊಪ್ಪಳ ನಗರದ ಈದ್ಗಾ ಮೈದಾನದಲ್ಲಿ ಜರುಗಿದ ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡ ಕೊಪ್ಪಳ ಶಾಸಕ ಕೆ ರಾಘವೇಂದ್ರ ಹಿಟ್ನಾಳ ,ಸಂಸದ ಕೆ ರಾಜಶೇಖರ ಹಿಟ್ನಾಳ, ಮಾಜಿ ಸಂಸದ ಸಂಗಣ್ಣ ಕರಡಿ ,ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರಸನ್ನ ಗಡಾದ್, ಜೆಡಿಎಸ್ ರಾಜ್ಯ ಪರಿಷತ್ ಕೋರ್ ಕಮಿಟಿ ಸದಸ್ಯ ಸಿವಿ ಚಂದ್ರಶೇಖರ, ನಗರಸಭೆಯ ಮಾಜಿ ಅಧ್ಯಕ್ಷ ಅಮ್ಜದ್ ಪಟೇಲ್, ಹಿರಿಯ ನ್ಯಾಯವಾದಿ ಎಸ್ ಆಸಿಫ ಅಲಿ, ನಗರ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಂ ಪಾಷಾ ಕಾಟನ್, ಸೈಯದ್ ಫೌಂಡೇಶನ್ ಅಧ್ಯಕ್ಷ ಡಾ, ಕೆ ಎಂ ಸಯ್ಯದ್ ಅಂಜುಮನ್ ಕಮಿಟಿ ಅಧ್ಯಕ್ಷ ಎಂಡಿ ಆಸಿಫ್ ಕರ್ಕಿಹಳ್ಳಿ, ಮತ್ತು ಕರ್ನಾಟಕ ಮುಸ್ಲಿಂ ಯುನಿಟಿ ಜಿಲ್ಲಾಧ್ಯಕ್ಷ ಎಂಡಿ ಜೀಲಾನ್ ಕಿಲ್ಲೆ ದಾರ್ ಸೇರಿದಂತೆ ಅನೇಕ ಜನ ಗಣ್ಯರಿಗೆ ವಿವಿಧ ರಾಜಕಾರಣಿಗಳಿಗೆ ಜನ ಪ್ರತಿನಿಧಿಗಳಿಗೆ ಈದ್ಗಾ ಕಮಿಟಿ ಪರವಾಗಿ ಸನ್ಮಾನಿಸಿ ಶುಭ ಕೋರಲಾಯಿತು ಈ ಸಂದರ್ಭದಲ್ಲಿ ಈದ್ಗಾ ಕಮಿಟಿಯ ಆಡಳಿತಾಧಿಕಾರಿ ಗೌಸ್ ಸಾಬ್ ಸರ್ದಾರ್ ಸೇರಿದಂತೆ ಪಂಚ್ ಕಮಿಟಿಯ ಮಸೀದಿ ಕಮಿಟಿಯ ಪದಾಧಿಕಾರಿಗಳು ವಿವಿಧ ಸಂಘಟನೆಗಳ ಪದಾಧಿಕಾರಿಗಳು ಕಾರ್ಯಕರ್ತರು ಮತ್ತು ಅಭಿಮಾನಿಗಳು ಪಾಲ್ಗೊಂಡಿದ್ದರು.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 