ಕುದರಿ ಗಾಡಿ ಬೈಕ್ ಡಿಕ್ಕಿ: ಬೈಕ್ ಸವಾರ ಸಾವು
Horse carriage collides with bike: Biker dies
ಲೋಕದರ್ಶನ ವರದಿ
ಜಮಖಂಡಿ 10: ತಾಲ್ಲೂಕಿನ ಕಲಬೀಳಗಿ ಗ್ರಾಮದಲ್ಲಿ ಬಾಲಕನೊರ್ವನು ಕುದರಿ ಗಾಡಿಯನ್ನು ಓಡಿಸಿಕೊಂಡು ಬರುವ ಸಮಯದಲ್ಲಿ ಬೈಕ್ ಸವಾರನಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಸಂಭವಿಸಿದೆ.
ಗೋಠೆ ಗ್ರಾಮದ ಕಡೆಯಿಂದ ಬೈಕ್ ಸವಾರ ಪಂಡಿತ ಜ್ಞಾನೋಭಾ ಪವಾರ (36) ಕಲಬೀಳಗಿ ಗ್ರಾಮದ ರಸ್ತೆ ಕಡೆಗೆ ಹೋಗುವ ಸಮಯದಲ್ಲಿ ಕುದುರೆಯನ್ನು ಓಡಿಸಿಕೊಂಡು ಬರುತ್ತಿದ್ದ ಬಾಲಕ ಮಲ್ಲಿಕಾರ್ಜುನ ಶಾಂತಯ್ಯ ಮಠಪತಿ (17) ಗೋಠೆ ಗ್ರಾಮದಿಂದ ಕಲಬೀಳಗಿ ಕಡೆಗೆ ಅತೀ ವೇಗವಾಗಿ ಕುದರೆ ಗಾಡಿಯನ್ನು ಓಡಿಕೊಂಡಿಸಿಕೊಂಡು ಬಂದು ಬೈಕ್ ಸವಾರನಿಗೆ ಡಿಕ್ಕಿ ಹೊಡೆದ ಪರಿಣಾಮ ಎದೆ ಭಾಗಕ್ಕೆ ತೀವ್ರ ಪಟ್ಟಾದ ಕಾರಣ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.
ಈ ಕುರಿತು ಸಾವಳಗಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು. ಪಿಎಸ್ಐ ಅಪ್ಪಣ ಐಗಳಿ ತನಿಖೆಯನ್ನು ಮುಂದುವರಿಸಿದ್ದಾರೆಂದು ತಿಳಿಸಿದ್ದಾರೆ.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 