ಹೊಸಪೇಟೆ: ಬೈಲುವದ್ದಿಗೆರೆ ಗ್ರಾಮದಲ್ಲಿ ಚಿರತೆ ದಾಳಿ
ಹೊಸಪೇಟೆ 18: ತಾಲೂಕಿನ ಬೈಲುವದ್ದಿಗೆರೆ ಗ್ರಾಮದ ಹೊಲವೊಂದರಲ್ಲಿ ಕಟ್ಟಿಹಾಕಿದ್ದ ಎತ್ತನ್ನು ಬುಧವಾರ ಚಿರತೆ ಕೊಂದು ಹಾಕಿದೆ. ಗ್ರಾಮದ ರೈತ ಉಳ್ಳಾಗಡ್ಡಿ ವೀರಣ್ಣಗೆ ಸೇರಿದ ಎತ್ತು ಸತ್ತಿದೆ. ಬೈಲುವದ್ದಿಗೆರೆ, ಗುಂಡ್ಲುವದ್ದಿಗೆರೆ ಪ್ರದೇಶಗಳಲ್ಲಿ ಚಿರತೆಗಳು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದು, ರೈತರು ಭಯದಲ್ಲಿ ಜೀವನ ನಡೆಸುವಂತಾಗಿದೆ. ಚಿರತೆ ಸೆರೆ ಹಿಡಿಯುವಂತೆ ಅರಣ್ಯ ಅಧಿಕಾರಿಗಳಿಗೆ ಮನವಿ ಮಾಡಿದರೂ ನಿರ್ಲಕ್ಷಿಸಿದ್ದಾರೆ. ಇದರಿಂದ ಜಾನುವಾರುಗಳನ್ನು ಕಳೆದುಕೊಳ್ಳುವಂತಾಗಿದೆ. ಈಗಾದರೂ ಅಧಿಕಾರಿಗಳು ಎಚ್ಚೆತ್ತುಕೊಳ್ಳಬೇಕು. ಚಿರತೆ ದಾಳಿಯಿಂದ ಜಾನುವಾರು ಕಳೆದುಕೊಂಡ ರೈತರಿಗೆ ಅರಣ್ಯ ಇಲಾಖೆ ಜಾನುವಾರುಗಳನ್ನೇ ಪರಿಹಾರವಾಗಿ ನೀಡಬೇಕು ಎಂದು ರೈತರಾದ ಉಳ್ಳಾಗಡ್ಡಿ ವೀರಣ್ಣ, ಶಿವಕುಮಾರ ಆಗ್ರಹಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 