ಹೊಸಪೇಟೆ: ಬೈಲುವದ್ದಿಗೆರೆ ಗ್ರಾಮದಲ್ಲಿ ಚಿರತೆ ದಾಳಿ
ಹೊಸಪೇಟೆ 18: ತಾಲೂಕಿನ ಬೈಲುವದ್ದಿಗೆರೆ ಗ್ರಾಮದ ಹೊಲವೊಂದರಲ್ಲಿ ಕಟ್ಟಿಹಾಕಿದ್ದ ಎತ್ತನ್ನು ಬುಧವಾರ ಚಿರತೆ ಕೊಂದು ಹಾಕಿದೆ. ಗ್ರಾಮದ ರೈತ ಉಳ್ಳಾಗಡ್ಡಿ ವೀರಣ್ಣಗೆ ಸೇರಿದ ಎತ್ತು ಸತ್ತಿದೆ. ಬೈಲುವದ್ದಿಗೆರೆ, ಗುಂಡ್ಲುವದ್ದಿಗೆರೆ ಪ್ರದೇಶಗಳಲ್ಲಿ ಚಿರತೆಗಳು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದು, ರೈತರು ಭಯದಲ್ಲಿ ಜೀವನ ನಡೆಸುವಂತಾಗಿದೆ. ಚಿರತೆ ಸೆರೆ ಹಿಡಿಯುವಂತೆ ಅರಣ್ಯ ಅಧಿಕಾರಿಗಳಿಗೆ ಮನವಿ ಮಾಡಿದರೂ ನಿರ್ಲಕ್ಷಿಸಿದ್ದಾರೆ. ಇದರಿಂದ ಜಾನುವಾರುಗಳನ್ನು ಕಳೆದುಕೊಳ್ಳುವಂತಾಗಿದೆ. ಈಗಾದರೂ ಅಧಿಕಾರಿಗಳು ಎಚ್ಚೆತ್ತುಕೊಳ್ಳಬೇಕು. ಚಿರತೆ ದಾಳಿಯಿಂದ ಜಾನುವಾರು ಕಳೆದುಕೊಂಡ ರೈತರಿಗೆ ಅರಣ್ಯ ಇಲಾಖೆ ಜಾನುವಾರುಗಳನ್ನೇ ಪರಿಹಾರವಾಗಿ ನೀಡಬೇಕು ಎಂದು ರೈತರಾದ ಉಳ್ಳಾಗಡ್ಡಿ ವೀರಣ್ಣ, ಶಿವಕುಮಾರ ಆಗ್ರಹಿಸಿದ್ದಾರೆ.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 