ಹೊಸಪೇಟೆ: ವಸ್ತು ಪ್ರದರ್ಶನ ಕಾರ್ಯಕ್ರಮ
ಲೋಕದರ್ಶನ ವರದಿ
ಹೊಸಪೇಟೆ 28: ಸ್ಥಳೀಯ ಪಟೇಲ್ ನಗರದ ವಿನಾಯಕ ಎಜ್ಯುಕೇಷನ್ ಸೊಸೈಟಿಯ ನ್ಯಾಷನಲ್ ಇಂಗ್ಲೀಷ್ ಪ್ರಿ ಪ್ರೈಮರಿ ಶಾಲೆಯಲ್ಲಿ ಗುರುವಾರ ವಸ್ತು ಪ್ರದರ್ಶನ ನಡೆಯಿತು.
ಸಿ.ಆರ್.ಪಿ. ಅಶೋಕ ವಸ್ತು ಪ್ರದರ್ಶನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಮಕ್ಕಳ ಸೃಜನಾತ್ಮಕ ಬೆಳವಣಿಗೆಗೆ ವಸ್ತು ಪ್ರದರ್ಶನ ಪೂರಕವಾಗಿದೆ. ಪಠ್ಯದ ಜೊತೆಗೆ ಪಠ್ಯೇತರ ಕಲೆಯೂ ಮಕ್ಕಳಲ್ಲಿನ ಪ್ರತಿಭೆ ಅನಾವರಣಕ್ಕೆ ವೇದಿಕೆಯಾಗಲಿದೆ ಎಂದರು.
ವಿನಾಯಕ ಎಜ್ಯುಕೇಷನ್ ಸೊಸೈಟಿಯ ಅಧ್ಯಕ್ಷ ಕಾಕುಬಾಳು ಸೀತಾರಾಮ ಶೆಟ್ಟಿ ಮಾತನಾಡಿ, ಪ್ರತಿ ಪಾಲಕರು ಮಕ್ಕಳಿನ ಕೌಶಲ ಕಲೆ ಅರಿತು ಪ್ರೋತ್ಸಾಹಿಸಬೇಕು ಎಂದರು.
ಸೊಸೈಟಿ ಉಪಾಧ್ಯಕ್ಷ ಕಾಕುಬಾಳು ಕೃಷ್ಣ ಮೂತರ್ಿ, ಸೊಸೈಟಿಯ ಖಜಾಂಚಿ ನಫೀಜಾ ಫರೂಕ್, ಆಡಳಿತ ಮಂಡಳಿ ಸದಸ್ಯ ಕಾಕುಬಾಳು ಶ್ರೀನಿವಾಸ, ಮುಖ್ಯ ಶಿಕ್ಷಕಿ ರುಬಿನಾ ಬಾನು, ಶಿಕ್ಷಕಿಯರಾದ ಶಬನಾ ಬಾನು, ಪದ್ಮಜಾ, ಮೆಹಮೂದ, ಶಶಿಕಲಾ, ಜಲಜಾಕ್ಷಿ, ಉಮಾ, ರೂಪಾ ಇತರರಿದ್ದರು.
ಇಂಗ್ಲೀಷ್, ಕನ್ನಡ, ಗಣಿತ ಮತ್ತು ವಿಜ್ಞಾನ ವಿಷಯ ಕುರಿತು ಮಕ್ಕಳಿಂದ ವಸ್ತು ಪ್ರದರ್ಶನ ಜರುಗಿತು. ನಾನಾ ವೇಷಭೂಷಣಗಳಿಂದ ಮಕ್ಕಳು ಗಮನಸೆಳೆದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 