ಗೃಹಿಣಿ ಆತ್ಮಹತ್ಯೆ
Housewife committed suicide
ಜಮಖಂಡಿ 07: ತಾಲೂಕಿನ ಹುನ್ನೂರ ಗ್ರಾಮದಲ್ಲಿ ಮಹಿಳೆಯೋರ್ವಳು ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.
ಶೃತಿ ಶಿವಕುಮಾರ ಮಠಪತಿ (24) ಮನನೊಂದು ನೇಣು ಬಿಗ್ಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಹುನ್ನೂರ ಗ್ರಾಮದ ಬನಶಂಕರಿ ಕಾಲೊನಿಯಲ್ಲಿ ಶೃತಿ ಶಿವಕುಮಾರ ಮಠಪತಿ ಪ್ರೀತಿಸಿ ಮದುವೆಯಾಗಿದ್ದು. ಬಾಡಿಗೆ ಮನೆ ಮಾಡಿಕೊಂಡು ದಂಪತಿಗಳು ಸುಖಸಂಸಾರವನ್ನು ಮಾಡಿಕೊಂಡು ವಾಸವಾಗಿದ್ದು. 1.5 ವರ್ಷದ ಗಂಡು ಮಗುವಿಗೆ ಬೆಳಗ್ಗೆ ಬೇಗ ಎದ್ದು ಮಗುವಿಗೆ ಸರಿಯಾಗಿ ಊಟ, ಉಪಚಾರ ಮಾಡುತ್ತಿಲ್ಲ. ಪ್ರತಿ ದಿನ ತಡವಾಗಿ ಏಳುತ್ತಿಯಾ ಎಂದು ಪತಿ ತನ್ನ ಪತ್ನಿಗೆ ಹೇಳಿದ ವಿಚಾರಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಸಾರ್ವಜನಿಕರಿಂದ ಮಾಹಿತಿ ತಿಳಿದುಬರುತ್ತದೆ.
ಇನ್ನೂ ನಿಖರವಾದ ಮಾಹಿತಿ ತಿಳಿದು ಬಂದಿರುವುದಿಲ್ಲ.ಈ ಕುರಿತು ಗ್ರಾಮೀಣ ಪೋಲಿಸ್ ಠಾಣಿಯಲ್ಲಿ ಪ್ರಕರಣ ದಾಖಲಾಗಿದ್ದು. ಸ್ಥಳಕ್ಕೆ ಪೋಲಿಸರು ಭೇಟಿ ನೀಡಿ ತನಿಖೆಯನ್ನು ಮುಂದುವರಿಸಿದ್ದಾರೆ.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 