ತುರ್ತು ಪರಿಸ್ಥಿತಿಯಲ್ಲಿ ಹೊಯ್ಸಳ ಉಪಯೋಗಿಸಿಕೊಳ್ಳಿ: ಭಾಸ್ಕರ್ ರಾವ್
ಬೆಂಗಳೂರು, ಏ.11, ಹೊಯ್ಸಳ ನಿಮ್ಮದು. ನಿಮ್ಮ ತುರ್ತು ಪರಿಸ್ಥಿತಿಗಳಲ್ಲಿ ಉಪಯೋಗಿಸಿಕೊಳ್ಳಿ ಎಂದು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಸಾರ್ವಜನಿಕರಿಗೆ ತಿಳಿಸಿದ್ದಾರೆ.ಸಾಮಾಜಿಕ ಜಾಲತಾಣಗಳಲ್ಲಿ ಕೊರೊನಾ ಲಾಕ್ಡೌನ್ ಸಂಬಂಧ ಪ್ರಶ್ನೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆಯುಕ್ತರು ಟ್ವಿಟರ್ನಲ್ಲಿ ಕ್ರಿಯಾಶೀಲವಾಗಿದ್ದಾರೆ.ಶುಕ್ರವಾರ ಗರ್ಭಿಣಿಯನ್ನು ಆಸ್ಪತ್ರೆಗೆ ಕರೆದೊಯ್ಯಬೇಕು ಎಂದು ಟ್ವೀಟ್ ಮಾಡಿದ್ದ ವ್ಯಕ್ತಿಯೋರ್ವನಿಗೆ ಹೊಯ್ಸಳ ಕಳಿಸಿಕೊಟ್ಟು ನೆರವಾಗಿದ್ದರು.ಇದೀಗ ಹೊಯ್ಸಳವನ್ನು ನಿಮ್ಮ ತುರ್ತು ಪರಿಸ್ಥಿತಿಗೆ ಬಳಸಿಕೊಳ್ಳಿ ಎಂದು ಟ್ವೀಟ್ ಮಾಡಿದ್ದಾರೆ.ಹೊಯ್ಸಳ ಸೇವೆಗಾಗಿ 100ಕ್ಕೆ ಕರೆ ಮಾಡಿ. ಪ್ರತಿ ಕರೆಯನ್ನು ನಾವು ಗಂಭೀರವಾಗಿ ಪರಿಗಣಿಸುತ್ತೇವೆ. ದಯವಿಟ್ಟು ಪೊಲೀಸ್ ಕಾರು ಬಳಸಿಕೊಳ್ಳಿ ಎಂದು ಆಯುಕ್ತರು ಕೋರಿದ್ದಾರೆ.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 