ತುರ್ತು ಪರಿಸ್ಥಿತಿಯಲ್ಲಿ ಹೊಯ್ಸಳ ಉಪಯೋಗಿಸಿಕೊಳ್ಳಿ: ಭಾಸ್ಕರ್ ರಾವ್
ಬೆಂಗಳೂರು, ಏ.11, ಹೊಯ್ಸಳ ನಿಮ್ಮದು. ನಿಮ್ಮ ತುರ್ತು ಪರಿಸ್ಥಿತಿಗಳಲ್ಲಿ ಉಪಯೋಗಿಸಿಕೊಳ್ಳಿ ಎಂದು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಸಾರ್ವಜನಿಕರಿಗೆ ತಿಳಿಸಿದ್ದಾರೆ.ಸಾಮಾಜಿಕ ಜಾಲತಾಣಗಳಲ್ಲಿ ಕೊರೊನಾ ಲಾಕ್ಡೌನ್ ಸಂಬಂಧ ಪ್ರಶ್ನೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆಯುಕ್ತರು ಟ್ವಿಟರ್ನಲ್ಲಿ ಕ್ರಿಯಾಶೀಲವಾಗಿದ್ದಾರೆ.ಶುಕ್ರವಾರ ಗರ್ಭಿಣಿಯನ್ನು ಆಸ್ಪತ್ರೆಗೆ ಕರೆದೊಯ್ಯಬೇಕು ಎಂದು ಟ್ವೀಟ್ ಮಾಡಿದ್ದ ವ್ಯಕ್ತಿಯೋರ್ವನಿಗೆ ಹೊಯ್ಸಳ ಕಳಿಸಿಕೊಟ್ಟು ನೆರವಾಗಿದ್ದರು.ಇದೀಗ ಹೊಯ್ಸಳವನ್ನು ನಿಮ್ಮ ತುರ್ತು ಪರಿಸ್ಥಿತಿಗೆ ಬಳಸಿಕೊಳ್ಳಿ ಎಂದು ಟ್ವೀಟ್ ಮಾಡಿದ್ದಾರೆ.ಹೊಯ್ಸಳ ಸೇವೆಗಾಗಿ 100ಕ್ಕೆ ಕರೆ ಮಾಡಿ. ಪ್ರತಿ ಕರೆಯನ್ನು ನಾವು ಗಂಭೀರವಾಗಿ ಪರಿಗಣಿಸುತ್ತೇವೆ. ದಯವಿಟ್ಟು ಪೊಲೀಸ್ ಕಾರು ಬಳಸಿಕೊಳ್ಳಿ ಎಂದು ಆಯುಕ್ತರು ಕೋರಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 