ಮಾನವ ಜನ್ಮ ದೊಡ್ಡದು: ಸಂಗಮೇಶ
Human birth is great: Sangamesha
ತಾಳಿಕೋಟೆ 09: ಭಗವಂತ ಸೃಷ್ಟಿಸಿರುವ ಈ ಜಗತ್ತಿನಲ್ಲಿ ಮಾನವ ಜನ್ಮ ಬಹುದೊಡ್ಡದು 84 ಲಕ್ಷ ಜೀವರಾಶಿಗಳಲ್ಲಿ ನಮಗೆ ಮಾತ್ರ ಮಾತು, ಬುದ್ದಿ, ತಿಳಿವಳಿಕೆ ನೀಡಿದ್ದು ಅದನ್ನು ಸದುಪಯೋಗಪಡಿಸಿಕೊಳ್ಳುವಂತೆ ಪ್ರವಚನಕಾರ ಅಂಬಳನೂರ ಸಂಗಮನಾಥ ದೇವರು ಹೇಳಿದರು.
ಅವರು ಪಟ್ಟಣದ ಶ್ರೀ ಖಾಸ್ಕತ ಮಹಾಶಿವಯೋಗಿಗಳವರ 129ನೆ ಹಾಗೂ ವಿರಕ್ತ ಮಹಾಸ್ವಾಮಿಗಳ 11ನೇ ಪುಣ್ಯ ಸ್ಮರಣೋತ್ಸವ ಅಂಗವಾಗಿ ಶ್ರೀ ಖಾಸ್ಸತೇಶ್ವರ ಮಠದಲ್ಲಿ ಭಾನುವಾರ ಪ್ರಾರಂಭವಾದ ಆಧ್ಯಾತ್ಮಿಕ ಪ್ರವಚನಕ್ಕೆ ಚಾಲನೆ ನಿಡಿ ಮಾತನಾಡಿದರು. ಖಾಸ್ಗತೇಶ್ವರ ಮಠದ ಪೀಠಾಧಿಪತಿ ಬಾಲ ಶಿವಯೋಗಿ ಸಿದ್ದಲಿಂಗ ದೇವರ ಅಧ್ಯಕ್ಷತೆ ವಹಿಸಿದ್ದರು. ಗವಾಯಿಗಳಾಗಿ ಮಹೇಶಕುಮಾರ ಭಂಟನೂರ, ಬಸನಗೌಡ ಬಿರಾದಾರ ಚೋಕಾವಿ ಕಾರ್ಯನಿರ್ವಹಿಸುತ್ತಿದ್ದಾರೆ ಸೆ. 12ರವರೆಗೆ ಪ್ರತಿ ಸಂಜೆ 7ರಿಂದ 8.30 ಗಂಟೆಯವರೆಗೆ ಈ ಆಧ್ಯಾತ್ಮಿಕ ಪ್ರವಚನ ನಡೆಯುವುದು. ಸೆ.12ರಂದು ನಸುಕಿನ ಜಾವ 5 ಗಂಟೆಗೆ ಉಭಯಶ್ರೀಗಳ ಗದ್ದುಗೆಗೆ ಮಹಾರುದ್ರಾಭಿಷೇಕ ನಡೆಯಲಿದ್ದು, ಮಹಾಪ್ರಸಾದ ಜರುಗುವುದು. ಅಂದು ಸಂಜೆ 7 ಗಂಟೆಗೆ ಹರ-ಗುರು ಚರಮೂರ್ತಿಗಳಿಂದ ಧರ್ಮಸಭೆ ಹಾಗೂ ಸಂಗೀತ ಕಾರ್ಯಕ್ರಮ ಜರುಗಲಿದೆ.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 