ರಾಜ್ಯ, ದೇಶದ ಸಮಸ್ಯೆಗಳನ್ನು ಸಮರ್ಥವಾಗಿ ಸಂಸತ್ತಿನಲ್ಲಿ ಪ್ರಸ್ತಾಪಿಸುತ್ತೇನೆ: ಖರ್ಗೆ
ಬೆಂಗಳೂರು, ಜೂನ್ 12,ತಾವು ವಿಧಾನಸಭೆಗೆ ಆಯ್ಕೆಯಾದಷ್ಟು ಬಾರಿ ಆಯ್ಕೆಯಾದವರು ಬಿಜೆಪಿಯಲ್ಲಿ ಯಾರೂ ಇಲ್ಲ. ಬಿಜೆಪಿಯವರು ತಮ್ಮಷ್ಟು ವರ್ಷ ರಾಜಕಾರಣ ಮಾಡಲಿ ನೋಡೋಣ ಎಂದು ರಾಜ್ಯಸಭಾ ಕಾಂಗ್ರೆಸ್ ನೂತನ ಸದಸ್ಯ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಬಿಜೆಪಿಗೆ ಸವಾಲು ಹಾಕಿದ್ದಾರೆ. ನಗರದಲ್ಲಿಂದು ಹಿಂಭಾಗಿಲಿನ ಮೂಲಕ ರಾಜ್ಯಸಭೆಗೆ ಪ್ರವೇಶಿಸಿದ್ದಾರೆ ಎಂಬ ಬಿಜೆಪಿ ನಾಯಕರ ಆರೋಪ ವಿಚಾರಕ್ಕೆ ಕಿಡಿಕಾರಿದ ಮಲ್ಲಿಕಾರ್ಜುನ ಖರ್ಗೆ, ರಾಜ್ಯದ, ದೇಶದ ಸಮಸ್ಯೆಗಳನ್ನು ಸಮರ್ಥವಾಗಿ ಸಂಸತ್ತಿನಲ್ಲಿ ಪ್ರಸ್ತಾಪಿಸುತ್ತೇನೆ. ಇದಕ್ಕೆ ಅವರ ಪಕ್ಷ ಅವಕಾಶ ನೀಡುತ್ತದೆಯೋ ಎಲ್ಲವೋ ನೋಡೋಣ. ಒಬ್ಬರ ಮೇಲೊಬ್ಬರು ರಾಜಕಾರಣ ಮಾಡುವುದು ಬೇಡ ಎಂದು ಬಿಜೆಪಿ ನಾಯಕರ ಹೇಳಿಕೆಗೆ ಪ್ರತ್ಯುತ್ತರ ನೀಡಿದರು.ಎಐಸಿಸಿ ಅಧಿನಾಯಕಿ ಸೋನಿಯಾ ಗಾಂಧಿ ಅವರು ತಮ್ಮ ಮೇಲೆ ನಂಬಿಕೆ ಇಟ್ಟು ರಾಜ್ಯಸಭೆಗೆ ಕಳುಹಿಸಿದ್ದಾರೆ. ಅವರಿಟ್ಟಿರುವ ನಂಬಿಕೆಯನ್ನು ಉಳಿಸಿಕೊಳ್ಳುವ ಪ್ರಯತ್ನ ಮಾಡುವುದಾಗಿ ಮಲ್ಲಿಕಾರ್ಜುನ್ ಖರ್ಗೆ ಭರವಸೆ ನೀಡಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 