ಐಐಟಿಗಳು ಪರಿವರ್ತನೆಯ ಸಾಧನಗಳು: ಪ್ರಧಾನಿ
ಮುಂಬೈ: ಐಐಟಿ ಬಾಂಬೆಗೆ 1 ಸಾವಿರ ಕೋಟಿ ರುಪಾಯಿ ನೆರವು ಘೋಷಿಸಿದ ಪ್ರಧಾನಿ ನರೇಂದ್ರ ಮೋದಿ ಅವರು, ಐಐಟಿಗಳು ತಂತ್ರಜ್ಞಾನ ಸಂಸ್ಥೆಗಳು ಮಾತ್ರವಲ್ಲ. ಅವು ಭಾರತದ ಪರಿವರ್ತನೆಯ ಸಾಧನಗಳು ಎಂದು ಶನಿವಾರ ಹೇಳಿದ್ದಾರೆ.
ಇಂದು ಐಐಟಿ ಬಾಂಬೆಯ 56ನೇ ಘಟಿಕೋತ್ಸವದಲ್ಲಿ ಭಾಗವಹಿಸಿ ಮಾತನಾಡಿದ ಪ್ರಧಾನಿ, ಹೊಸ ಹೊಸ ಆವಿಷ್ಕಾರಗಳು ಮತ್ತು ಉದ್ಯಮಶೀಲತೆ ಭಾರತ ಆಥರ್ಿಕ ಅಭಿವೃದ್ಧಿ ಹೊಂದಿದ ದೇಶವನ್ನಾಗಿ ನಿಮರ್ಿಸಲು ಅಡಿಪಾಯವಾಗುತ್ತಿವೆ ಎಂದರು.
ನಿಮ್ಮ ಮುಖದಲ್ಲಿರುವ ವಿಶ್ವಾಸ ನೋಡಿದರೆ ನಾವು ಸರಿಯಾದ ದಾರಿಯಲ್ಲಿ ಸಾಗುತ್ತಿದ್ದೇವೆ ಎಂಬುದು ಸ್ಪಷ್ಟವಾಗುತ್ತದೆ. ಉತ್ತಮ ಯೋಚನೆಗಳು ಸಕರ್ಾರಿ ಕಟ್ಟಡಗಳಲ್ಲಿ ಅಥವಾ ಅಲಂಕಾರಿಕ ಕಚೇರಿಗಳಲ್ಲಿ ಹುಟ್ಟುವುದಿಲ್ಲ. ಉತ್ತಮ ಯೋಚನೆಗಳು ಐಐಟಿ ಬಾಂಬೆಯಂತಹ ಕ್ಯಾಂಪಸ್ ಗಳಲ್ಲಿ ಹುಟ್ಟುತ್ತವೆ ಎಂದು ಪ್ರಧಾನಿ ಹೇಳಿದ್ದಾರೆ.
ಹೊಸ ಹೊಸ ಆವಿಷ್ಕಾರಗಳು ನಡೆಯದೇ ಇದ್ದರೆ ಸಮಾಜ ಅಭಿವೃದ್ಧಿಯಾಗುವುದಿಲ್ಲ. ಭಾರತ ಈಗ ಸ್ಟಾಟರ್್ ಅಪ್ ಗಳ ತಾಣವಾಗಿ ಅಭಿವೃದ್ಧಿ ಹೊಂದುತ್ತಿದ್ದು, ಹೊಸ ಆವಿಷ್ಕಾರಗಳ ತುಡಿತ ಕಾಣಿಸುತ್ತಿದೆ ಎಂದರು.
ಇದೇ ವೇಳೆ ಹವಾಮಾನ ವೈಪರೀತ್ಯವನ್ನು ನಿಯಂತ್ರಿಸುವ, ಕೃಷಿ ಉತ್ಪಾದನೆಯನ್ನು ಹೆಚ್ಚಿಸುವ, ಸ್ವಚ್ಛವಾದ ಗಾಳಿ, ನೀರಿನ ಸಂರಕ್ಷಣೆ, ಅಪೌಷ್ಠಿಕತೆ ಮತ್ತು ತ್ಯಾಜ್ಯ ಸಂಸ್ಕರಣೆ ಬಗ್ಗೆ ಹೊಸ ಹೊಸ ಆವಿಷ್ಕಾರಗಳನ್ನು ನಡೆಸಬೇಕು ಎಂದು ಐಐಟಿ ವಿದ್ಯಾಥರ್ಿಗಳಿಗೆ ಪ್ರಧಾನಿ ಕರೆ ನೀಡಿದರು.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 