ಜಾಗತಿಕ ತಾಪಮಾನ ಏರಿಕೆ, ಭವಿಷ್ಯದಲ್ಲಿ ತಂದೊಡ್ಡಲಿದೆ ಭಾರಿ ಸಂಕಷ್ಟ ..!!
ನವದೆಹಲಿ, ಫೆ 14, ಜಾಗತಿಕ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಇದು ದೇಶದ ಮೇಲೆ ತೀವ್ರ ಪರಿಣಾಮ ಬೀರಲಿದೆ. ಅದರಲ್ಲಿಯೂ ಕರಾವಳಿ ಭಾಗದಲ್ಲಿ ಗರಿಷ್ಠ ತಾಪಮಾನ 4 ಡಿಗ್ರಿ ಹೆಚ್ಚಳವಾದರೆ ಸಮುದ್ರದ ಮಟ್ಟ ಏರಿಕೆಯಾಗಿ ಕರಾವಳಿ ಪಟ್ಟಣಗಳು ಅಪೋಶನಕ್ಕೆ ಒಳಗಾಗಿ 5 ಕೋಟಿಗೂ ಹೆಚ್ಚಿನ ಜನರು ಶಾಶ್ವತವಾಗಿ ನೆಲೆ ಕಳೆದುಕೊಳ್ಳಲಿದ್ದಾರೆ. ಇದು ಭವಿಷ್ಯ ಭಾರಿ ಅನಾಹುತ ಮತ್ತು ವಿಪ್ಲವಗಳಿಗೂ ಕಾರಣವಾಗಲಿದೆ ಎಂಬ ಆತಂಕಕಾರಿ ಅಂಶ ಫ್ಯೂಚರ್ ಅರ್ತ್ ಸಂಸ್ಥೆಯ ವರದಿಯಲ್ಲಿ ಬಹಿರಂಗವಾಗಿದೆ. ಹೆಚ್ಚುತ್ತಿರುವ ತಾಪಮಾನವು ಕೃಷಿ ಕ್ಷೇತ್ರದ ಮೇಲೆಯೂ ಬಹಳ ಕೆಟ್ಟ ಪರಿಣಾಮ ಬೀರಲಿದ್ದು, ಇದು ತೀವ್ರ ಜಲ ಮತ್ತು ಆಹಾರ ಬಿಕ್ಕಟ್ಟಿಗೂ ಕಾರಣವಾಗಲಿದೆ ಎಂದು ವರದಿಯಲ್ಲಿ ಹೇಳಲಾಗಿದೆ.ಫ್ಯೂಚರ್ ಅರ್ತ್ ಸಂಸ್ಥೆಯ ನೇತೃತ್ವದಲ್ಲಿ 52 ದೇಶಗಳ 200 ಕಕ್ಉ ಹೆಚ್ಚು ಪರಿಣಿತ ವಿಜ್ಞಾನಿಗಳ ತಂಡ ಸಿದ್ಧಪಡಿಸಿದ್ದ 'ಭೂಮಿಯ ಮೇಲೆ ನಮ್ಮ ಭವಿಷ್ಯ' ಎಂಬ ಸಂಶೋಧನಾ ವರದಿಯನ್ನು ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ಬಿಡುಗಡೆ ಮಾಡಲಾಗಿದೆ ಎನ್ನಲಾಗಿದೆ. ಜಗತ್ತಿನಲ್ಲಿ ಪ್ರತಿ ವರ್ಷ 30 ಕೋಟಿ ಟನ್ ಪ್ಲಾಸ್ಟಿಕ್ ತ್ಯಾಜ್ಯ ಉತ್ಪತ್ತಿಯಾಗುತ್ತಿದ್ದು, ಅಷ್ಟೇ ಪ್ರಮಾಣದ ಪ್ಲಾಸ್ಟಿಕ್ ತ್ಯಾಜ್ಯವೂ ಸಮುದ್ರ ಸೇರುತ್ತಿದೆ ಎಂಬ ಆಘಾತಕಾರಿ ಅಂಶ ಸಹ ವರದಿಯಲ್ಲಿ ಉಲ್ಲೇಖವಾಗಿದೆ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 