ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವವರನ್ನು ಗುರುತಿಸಿ ದಂಡ
Identify and fine those who litter in public places
ಲೋಕದರ್ಶನ ವರದಿ
ದಾಂಡೇಲಿ 18 : ದಾಂಡೇಲಿ ನಗರಸಭೆಯ ಪೌರಾಯುಕ್ತರಾದ ವಿವೇಕ್ ಬನ್ನೆಯವರು ಉದ್ದೇಶಪೂರ್ವಕವಾಗಿ ಕಸ ಎಸೆಯುವವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲು ಸೂಚನೆ ನೀರುವ ಹಿನ್ನೆಲೆಯಲ್ಲಿ ಆರೋಗ್ಯ ನೀರೀಕ್ಷಕರ ತಂಡ ಈಗ ಹದ್ದಿನ ಕಣ್ಣಿಟ್ಟು ಪರೀಶೀಲನೆ ನಡೆಸುತ್ತಿದೆ. ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವವರನ್ನು ಗುರುತಿಸಿ ದಂಡ ವಿಧಿಸುವ ಕಾರ್ಯ ಮುಂದುವರೆಯಲಿದೆ. ಎಂದು ತಿಳಿದು ಬಂದಿದೆ. ಈಗಾಗಲೇ ಎಚ್ಚರಿಕೆ ನೀಡಿದಾಗಲೂ ಕಸ ಎಸೆಯುತ್ತಿರುವವರಿಗೆ ನೋಟಿಸು ನೀಡಿ ದಂಡ ವಿಧಿಸಲಾಗಿದೆ. ಇದುವರೆಗೂ 7500 ರೂಪಾಯಿ ದಂಡ ವಸೂಲಿ ಮಾಡಲಾಗಿದೆ. ದಂಡ ನೀಡಲು ನಿರಾಕರಿಸಿದ ವ್ಯಕ್ತಿಯೋರ್ವನ ಮೇಲೆ ಪ್ರಕರಣ ದಾಖಲಿಸಿರುವದಾಗಿ ಮಾಹಿತಿ ನೀಡಿದ್ದಾರೆ. ಬರಲಿರುವ ದಿನಗಳಲ್ಲಿ ಯಾವುದೇ ಮುಲಾಜಿಲ್ಲದೇ ಕಸ ಎಸೆಯುವವರ ವಿರುದ್ದ ಕ್ರಮ ಕೈಗೊಳ್ಳಲಾಗುವದು ಎಂದು ತಿಳಿಸಲಾಗಿದೆ..
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 