ಧೋನಿ ಫಿಟ್, ಲಯದಲ್ಲಿದ್ದರೆ ಅವರನ್ನು ವಿಶ್ವಕಪ್ ತಂಡದಿಂದ ಕಡೆಗಣಿಸುವಂತಿಲ್ಲ: ಜಾಫರ್
ನವದೆಹಲಿ, ಮಾ.19, ಟೀಮ್ ಇಂಡಿಯಾದ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ಫಿಟ್ ಆಗಿದ್ದು ಲಯದಲ್ಲಿದ್ದರೆ ಅವರನ್ನು ಕಡೆ ಗಣಿಸಲು ಸಾಧ್ಯವೇ ಇಲ್ಲ ಎಂದು ಮಾಜಿ ಆರಂಭಿಕ ಆಟಗಾರ ವಾಸೀಮ್ ಜಾಫರ್ ತಿಳಿಸಿದ್ದಾರೆ. ಇತ್ತೀಚಿಗೆ ಜಾಫರ್ ಎಲ್ಲ ಮಾದರಿಯ ಕ್ರಿಕೆಟ್ ಗೆ ಗುಡ್ ಬೈ ಹೇಳಿದ್ದರು. ಧೋನಿ ತಂಡ ಸೇರುವುದರಿಂದ ಕೆ.ಎಲ್ ರಾಹುಲ್ ಹಾಗೂ ರಿಷಭ್ ಪಂಥ್ ಅವರ ಮೇಲೆ ಒತ್ತಡ ಬೀಳಲಿದೆ ಎಂದಿದ್ದಾರೆ. “ಒಂದು ವೇಳೆ ಮಾಹಿ ಲಯದಲ್ಲಿದ್ದು, ದೈಹಿಕವಾಗಿ ಫಿಟ್ ಆಗಿದ್ದರೆ, ವಿಶ್ವಕಪ್ ತಂಡದಿಂದ ಅವರನ್ನು ಕೈ ಬಿಡುವ ಪ್ರಶ್ನೆ ಇಲ್ಲವೇ ಇಲ್ಲ. ಅವರು ವಿಕೆಟ್ ಹಿಂದೆ ತಂಡಕ್ಕೆ ಬಲ ತುಂಬ ಬಲ್ಲ ಆಟಗಾರ. ಧೋನಿ ತಂಡ ಸೇರಿದಾಗ, ಎಡಗೈ ಆಟಗಾರ ಎಂಬ ಕಾರಣದಿಂದ ಆಡಿಸುವುದಾದರೆ ಪಂತ್ ಅವರನ್ನು ಬ್ಯಾಟ್ಸ್ ಮನ್ ಆಗಿ ಆಡಿಸಬಹುದು” ಎಂದು ಜಾಫರ್ ತಿಳಿಸಿದ್ದಾರೆ.
ಮಹೇಂದ್ರ ಸಿಂಗ್ ಅವರು ಇಂಗ್ಲೆಂಡ್ ನಲ್ಲಿ ನಡೆದಿದ್ದ ಏಕದಿನ ವಿಶ್ವಕಪ್ ಸೆಮಿಫೈನಲ್ಸ್ ನಲ್ಲಿ ನ್ಯೂಜಿಲೆಂಡ್ ವಿರುದ್ಧ ಸೋತ ಬಳಿಕ ಬ್ಲ್ಯೂ ಜೆರ್ಸಿ ತೊಟ್ಟಿಲ್ಲ. ಅಲ್ಲದೆ ಅವರು ಮುಂಬರುವ ಟಿ-20 ವಿಶ್ವಕಪ್ ನಲ್ಲಿ ಆಡಬೇಕಾ ಬೇಡವಾ ಎಂಬುದರ ಬಗ್ಗೆ ಈಗಾಗಲೇ ಚರ್ಚೆಗಳು ಆರಂಭವಾಗಿದ್ದು, ಈ ಎಲ್ಲ ಪ್ರಶ್ನೆಗಳಿಗೆ ಧೋನಿ ಬ್ಯಾಟ್ ಎಂಬ ಮಾಯಾ ದಂಡದ ಮೂಲಕವೇ ಉತ್ತರಿಸಬೇಕಿದೆ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 