ಅಕ್ರಮ ಮೀನುಗಾರಿಕೆ ತಡೆಯಬೇಕು: ಜನಜಾಗೃತಿ ವೇದಿಕೆ ಆಗ್ರಹ
ಬೆಂಗಳೂರು, ಫೆ 6 : ಲೈಟ್ ಫಿಶಿಂಗ್ ಮತ್ತು ಟ್ರಾಲಿಂಗ್ ಮೀನುಗಾರಿಕೆಯನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನಿಷೇಧಿಸಿದ್ದು, ಕಾನೂನು ಉಲ್ಲಾಂಘಿಸುವ ಮೂಲಕ ಅಕ್ರಮವಾಗಿ ಮೀನುಗಾರಿಕೆ ನಡೆಸಲಾಗುತ್ತಿದೆ ಎಂದು ಕರ್ನಾಟಕ ರಾಜ್ಯ ಜನ ಜಾಗೃತಿ ವೇದಿಕೆ ರಾಜ್ಯಾಧ್ಯಕ್ಷ ರಾಜರತ್ನ ಸುನಿಲ್ ಆರೋಪಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲೈಟ್ ಫಿಶಿಂಗ್ ಮತ್ತು ಬುಲ್ ಟ್ರಾಲಿಂಗ್ ಮೀನುಗಾರಿಕೆಯಿಂದ ನಾಡದೋಣಿ ಮೀನುಗಾರಾರಿಗೆ ಅನ್ಯಾಯವಾಗುತ್ತಿದೆ. ರಾಜ್ಯದಲ್ಲಿ ಆರು ಲಕ್ಷಕ್ಕೂ ಅಧಿಕ ಜನರು ಇದನ್ನೇ ನಂಬಿ ಬದುಕು ನಡೆಸುತ್ತಿದ್ದಾರೆ ಎಂದು ತಮ್ಮ ಅಳಲು ತೋಡಿಕೊಂಡರು.
ಲೈಟ್ ಫಿಶಿಂಗ್ ಮತ್ತು ಬುಲ್ ಟ್ರಾಲಿ ಮೀನುಗಾರಿಕೆ ಅಕ್ರಮವಾಗಿ ಮುಂದುವರೆದರೆ ನಾಡ ದೋಣಿ ಮೀನುಗಾರರ ಲಕ್ಷಾಂತರ ಕುಟುಂಬಗಳು ನಷ್ಟ ಅನುಭವಿಸುತ್ತದೆ. ಜತೆಗೆ ಸಾಲದ ಹೊರೆ ತಾಳಲಾರದೆ ಆತ್ಮಹತ್ಯೆ ಹಾದಿಹಿಡಿಯಬೇಕಾಗುತ್ತದೆ. ಈಗಾಗಲೇ ಸಂಬಂಧಪಟ್ಟ ಸಚಿವರಿಗೆ ಹಾಗೂ ಇಲಾಖೆಯ ಮೇಲಾಧಿಕಾರಿಗಳ ಗಮನಕ್ಕೆ ಈ ವಿಚಾರ ತಂದಿದ್ದು, ಕೂಡಲೇ ಕಾರ್ಯ ಪ್ರವೃತ್ತರಾಗಿ ವಿಶೇಷ ತನಿಖಾ ತಂಡ ರಚಿಸಿ ತಕ್ಷಣ ಶಾಶ್ವತ ಪರಿಹಾರ ಕಲ್ಪಿಸಬೇಕೆಂದು ಮನವಿ ಮಾಡಿದರು. ಹಾಗೊಂದು ವೇಳೆ ಸರ್ಕಾರ ಈ ಕುರಿತು ನಿರ್ಲಕ್ಷ್ಯ ವಹಿಸಿದರೆ ವಿಧಾನಸೌಧ ಮುತ್ತಿಗೆ ಹಾಕುವುದಾಗಿ ಎಚ್ಚರಿಕೆ ನೀಡಿದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 