ಅಕ್ರಮ ಗಾಂಜಾ ವಶ: ಪ್ರಕರಣ ದಾಖಲು
ಬಾಗಲಕೋಟೆ೨೬: ಮುಧೋಳ ತಾಲೂಕಿನ ಮಹಾಲಿಂಗಪೂರ ಅಕ್ಕಿಮರಡಿ ರಸ್ತೆಯ ಧರಿಗೌಡ ಜಮೀನಿನ ಹತ್ತಿರ ಪರವಾನಿಗೆ ಇಲ್ಲದೇ ಕಾನೂನು ಬಾಹೀರವಾಗಿ ಮಾರಾಟ ಮಾಡುತ್ತಿದ್ದ 5 ಕೆ.ಜಿ 12 ಗ್ರಾಂ ತೂಕದ ಗಾಂಜಾ ಮತ್ತು ಎರಡು ಮೋಟಾರ ಸೈಕಲ್ಗಳನ್ನು ವಶಪಡಿಸಿಕೊಳ್ಳಲಾಗಿದೆ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ಧಶನದ ಮೇರೆಗೆ ಡಿ.ಸಿ.ಐ.ಬಿ ಘಟಕದ ಪೊಲೀಸ್ ನಿರೀಕ್ಷಕರಾದ ಬಿ.ಎಸ್.ಮಂಟೂರ ಅವರ ನೇತೃತ್ವದಲ್ಲಿ ಇತ್ತೀಚೆಗೆ ದಾಳಿ ನಡೆಸಿ ಗಾಂಜಾ ಮತ್ತು ಎರಡು ಮೋಟಾರ್ ಸೈಕಲ್ ಸೇರಿ ಒಟ್ಟು 90 ಸಾವಿರ ರೂ. ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಂಡು ಮಹಾಲಿಂಗಪೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದು, 3 ಜನ ಆರೋಪಿಗಳನ್ನು ದಸ್ತಗಿರಿ ಮಾಡಿನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.ಯಾಕುಬ್ ಬಸೀರ್ ಶಿಲ್ಲೆದಾರ, ವಾಸೀಮ ಇಮ್ರಾನ್ ನೌಶಾದ ಇಭುಸೆ ಹಾಗೂ ಸಯ್ಯದ ಲಾಲ್ಸಾಬ್ ಕುಲ್ಲೊಳ್ಳಿ ಆರೋಪಿಗಳಾಗಿದ್ದಾರೆ. ಸದರಿ ಕಾಯರ್ಾಚರಣೆಯಲ್ಲಿ ಬಾಗಲಕೋಟೆ ಪೊಲೀಸ್ ನಿರೀಕ್ಷಕ ಬಿ.ಎಸ್.ಮಂಟೂರ, ಸಿಎಚ್ಸಿ ಸುರೇಶ ನಾಯಕ, ಎಂ.ಎಸ್.ಬೆಂಡಿಗೇರಿಮಠ, ಪ್ರಭುಗೌಡ ಹಾಗೂ ಜೀಪ್ ಚಾಲಕ ಎಚ್.ಬಿ.ಚೌದರಿ ಇದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 