ಆಧುನಿಕ ಆಹಾರ ಪದ್ದತಿ ಯಿಂದ ಅನಾರೋಗ್ಯ
Illness due to modern diet
ಹೂವಿನಹಡಗಲಿ 12: ’ಆಧುನಿಕ ಆಹಾರ ಪದ್ದತಿ ಯಿಂದ ಅನಾರೋಗ್ಯ ತಡೆಯಲುಸಮತೋಲಿತ ಆಹಾರ ಪದ್ಧತಿ ಹಾಗೂ ಯೋಗ, ಪ್ರಾಣಾಯಾಮ, ಜೀವನಶೈಲಿ ಅಳವಡಿಸಿಕೊಂಡಲ್ಲಿ ರೋಗಗಳಿಂದ ಮುಕ್ತಿ ಪಡೆಯಬಹುದು’ ಎಂದು ಹರಪನಹಳ್ಳಿಯ ಜನನಿ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ, ಸಂಶೋಧನಾ ಕೇಂದ್ರದ ಮುಖ್ಯ ವೈದ್ಯಾಧಿಕಾರಿ ಡಾ.ರಾಜೇಶ್ ಪಾದೇಕಲ್ ಹೇಳಿದರು. ಪಟ್ಟಣದ ಲಿಟಲ್ ಚಾಂಪ್ಸ್ ಶಾಲೆಯಲ್ಲಿ ಶನಿವಾರ ಜನನಿ ಆಸ್ಪತ್ರೆ, ಪರಿಪೂರ್ಣ ಎಜ್ಯುಕೇಶನ್ ಟ್ರಸ್ಟ್ ಸಹಯೋಗದಲ್ಲಿ ಆಯೋಜಿಸಿದ್ದ ಉಚಿತ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಶಿಬಿರದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
’ತುರ್ತು ಹಾಗೂ ಶಸ್ತ್ರಚಿಕಿತ್ಸೆ ಹೊರತುಪಡಿಸಿ ಎಲ್ಲ ರೋಗಗಳಿಗೆ ಓಷಧ ರಹಿತ ವೈದ್ಯಪದ್ಧತಿಯಲ್ಲಿ ಚಿಕಿತ್ಸೆ ಇದೆ. ಇದರ ಪ್ರಯೋಜನ ಪಡೆದು ಉತ್ತಮ ಆರೋಗ್ಯ ಕಾಪಾಡಿಕೊಳ್ಳಬೇಕು. ರೋಗ ಬಾರದಂತೆ ತಡೆಯುವ, ರೋಗ ಗುಣಪಡಿಸುವ ಹಾಗೂ ದೇಹವನ್ನು ಸದೃಢಗೊಳಿಸುವ ಚಿಕಿತ್ಸೆಗಳು ಪ್ರಕೃತಿ ಚಿಕಿತ್ಸಾ ಪದ್ಧತಿಯಲ್ಲಿವೆ. ಈ ಕುರಿತು ಅರಿವು ಮೂಡಿಸಲು ಇಂತಹ ಶಿಬಿರ ಆಯೋಜಿಸಲಾಗುತ್ತಿದೆ’ ಎಂದು ತಿಳಿಸಿದರು.ಸಂಸ್ಥೆಯ ಮಾಧ್ಯಮ ಮತ್ತು ಸಾರ್ವಜನಿಕ ಸಂಪರ್ಕ ವಿಭಾಗದ ಮುಖ್ಯಸ್ಥ ಉದಯಶಂಕರ ಭಟ್ ಮಾತನಾಡಿದರು.ಪರಿಪೂರ್ಣ ಎಜ್ಯುಕೇಶನಲ್ ಟ್ರಸ್ಟ್ ಆಡಳಿತಾಧಿಕಾರಿ ಜಿ.ಕೊಟ್ರೇಶ್, ಮುಖ್ಯಶಿಕ್ಷಕರಾದ ಜಿ.ಮಲ್ಲಿಕಾರ್ಜುನ, ಎಸ್.ಶಿಲ್ಪಾ, ಶಿಕ್ಷಕ ಸೊಪ್ಪಿನ ಪ್ರಭುಗೌಡ ಉಪಸ್ಥಿತರಿದ್ದರು. 250ಕ್ಕೂ ಹೆಚ್ಚು ಜನರು ಶಿಬಿರದ ಪ್ರಯೋಜನ ಪಡೆದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 