ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡಿದ್ದ ಕಲಬುರಗಿಯ 19 ಜನ ಕ್ವಾರಂಟೈನ್ ನಲ್ಲಿ: ಗೋವಿಂದ ಕಾರಜೋಳ
ಬೆಂಗಳೂರು, ಏ.1, ದೆಹಲಿಯ ನಿಜಾಮುದ್ದೀನ್ ನಲ್ಲಿ ನಡೆದ ಸಾಮೂಹಿಕ ಪ್ರಾರ್ಥನೆ ಯಲ್ಲಿ ಪಾಲ್ಗೊಂಡಿದ್ದ ಕಲಬುರಗಿಯ 19 ಜನರನ್ನು ಜಿಲ್ಲಾಡಳಿತವು ಇಎಸ್ ಐ ಆಸ್ಪತ್ರೆಯ ಕ್ವಾರಂಟೈನ್ ನಲ್ಲಿ ಇಟ್ಟು, ತೀವ್ರ ನಿಗಾ ವಹಿಸಹಿಸಿದೆ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ತಿಳಿಸಿದ್ದಾರೆ. ಈ ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡವರು ಸ್ವಯಂ ಪ್ರೇರಿತರಾಗಿ ವೈದ್ಯರ ಬಳಿ ಬಂದು ತಪಾಸಣೆಗೊಳಗಾಗಬೇಕು. ಸರ್ಕಾರದ ವತಿಯಿಂದಲೇ ಕ್ವಾರಂಟೈನ್ ನಲ್ಲಿಟ್ಟು, ಚಿಕಿತ್ಸೆ ನೀಡಲಾಗುತ್ತದೆ. ಈ ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡವರು ಮುಕ್ತವಾಗಿ ವೈದ್ಯರ ಬಳಿ ಬರಬೇಕು. ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು. ತಮ್ಮ ಕುಟುಂಬದ ಹಾಗೂ ಸಮಾಜದ ಆರೋಗ್ಯದ ಸಂರಕ್ಷಣೆಗಾಗಿ ಸ್ವಯಂ ಪ್ರೇರಿತವಾಗಿ ವೈದ್ಯರ ಬಳಿ ಬಂದು ಆರೋಗ್ಯ ತಪಾಸಣೆಗೊಳಗಾಗಬೇಕು. ಕೊರೊನಾ ವೈರಸ್ ನಿಯಂತ್ರಣ ಕ್ಕಾಗಿ ಸಹಕರಿಬೇಕು ಎಂದು ಗೋವಿಂದ ಎಂ ಕಾರಜೋಳ ಮನವಿ ಮಾಡಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 