ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡಿದ್ದ ಕಲಬುರಗಿಯ 19 ಜನ ಕ್ವಾರಂಟೈನ್ ನಲ್ಲಿ: ಗೋವಿಂದ ಕಾರಜೋಳ
ಬೆಂಗಳೂರು, ಏ.1, ದೆಹಲಿಯ ನಿಜಾಮುದ್ದೀನ್ ನಲ್ಲಿ ನಡೆದ ಸಾಮೂಹಿಕ ಪ್ರಾರ್ಥನೆ ಯಲ್ಲಿ ಪಾಲ್ಗೊಂಡಿದ್ದ ಕಲಬುರಗಿಯ 19 ಜನರನ್ನು ಜಿಲ್ಲಾಡಳಿತವು ಇಎಸ್ ಐ ಆಸ್ಪತ್ರೆಯ ಕ್ವಾರಂಟೈನ್ ನಲ್ಲಿ ಇಟ್ಟು, ತೀವ್ರ ನಿಗಾ ವಹಿಸಹಿಸಿದೆ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ತಿಳಿಸಿದ್ದಾರೆ. ಈ ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡವರು ಸ್ವಯಂ ಪ್ರೇರಿತರಾಗಿ ವೈದ್ಯರ ಬಳಿ ಬಂದು ತಪಾಸಣೆಗೊಳಗಾಗಬೇಕು. ಸರ್ಕಾರದ ವತಿಯಿಂದಲೇ ಕ್ವಾರಂಟೈನ್ ನಲ್ಲಿಟ್ಟು, ಚಿಕಿತ್ಸೆ ನೀಡಲಾಗುತ್ತದೆ. ಈ ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡವರು ಮುಕ್ತವಾಗಿ ವೈದ್ಯರ ಬಳಿ ಬರಬೇಕು. ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು. ತಮ್ಮ ಕುಟುಂಬದ ಹಾಗೂ ಸಮಾಜದ ಆರೋಗ್ಯದ ಸಂರಕ್ಷಣೆಗಾಗಿ ಸ್ವಯಂ ಪ್ರೇರಿತವಾಗಿ ವೈದ್ಯರ ಬಳಿ ಬಂದು ಆರೋಗ್ಯ ತಪಾಸಣೆಗೊಳಗಾಗಬೇಕು. ಕೊರೊನಾ ವೈರಸ್ ನಿಯಂತ್ರಣ ಕ್ಕಾಗಿ ಸಹಕರಿಬೇಕು ಎಂದು ಗೋವಿಂದ ಎಂ ಕಾರಜೋಳ ಮನವಿ ಮಾಡಿದ್ದಾರೆ.
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ 