ಗದಗ ಜಿಲ್ಲಾಸ್ಪತ್ರೆ ಎನ್ಎಂಆರ್ ಸ್ಕ್ಯಾನ್ ಕೇಂದ್ರದ ಉದ್ಘಾಟನೆ
ಗದಗ 13: ಗದಗ ಜಿಲ್ಲಾಸ್ಪತ್ರೆಯಲ್ಲಿ 6.70 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲಾದ ಎನ್.ಎಂ.ಆರ್. ಸ್ಕ್ಯಾನ್ ಕೇಂದ್ರವನ್ನು ರಾಜ್ಯದ ಗಣಿ, ಭೂ ವಿಜ್ಞಾನ, ಅರಣ್ಯ, ಪರಿಸರ, ಜೀವಶಾಸ್ತ್ರ ಸಚಿವ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ ಅವರು ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ಜನಸಾಮಾನ್ಯರಿಗೆ ಅಗತ್ಯವಾದ ಅತ್ಯಾಧುನಿಕ ವೈದ್ಯಕೀಯ ಚಿಕಿತ್ಸಾ ಸೌಲಭ್ಯಗಳನ್ನು ಸಚಿವರು ಉದ್ಘಾಟಿಸಿದರು.
ರಾಜ್ಯದಲ್ಲಿ ಮೊಟ್ಟಮೊದಲಿಗೆ ಎನ್.ಎಂ. ಆರ್. ಸ್ಕ್ಯಾನ್ ಸೌಲಭ್ಯವನ್ನು ಉಚಿತವಾಗಿ ಒದಗಿಸುವ ಸೌಲಭ್ಯವನ್ನು ಗದಗ ಜಿಲ್ಲಾಸ್ಪತ್ರೆ ಹೊಂದಿದೆ ಎಂದು ಗದಗ ವೈದ್ಯಕೀಯ ವಿಜ್ಞಾನ ಸಂಸ್ಥೆ ನಿರ್ದೇಶಕ ಡಾ. ಪಿ.ಎಸ್. ಭೂಸರೆಡ್ಡಿ ಮಾಹಿತಿ ನೀಡಿದರು.
ಶಾಸಕ ಎಚ್.ಕೆ.ಪಾಟೀಲ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಗದಗ ಜಿ.ಪಂ. ಅಧ್ಯಕ್ಷ ಸಿದ್ಧಲಿಂಗೇಶ್ವರ ಎಚ್ ಪಾಟೀಲ, ಶಾಸಕರಾದ ಕಳಕಪ್ಪ ಬಂಡಿ, ಜಿ.ಪಂ. ಉಪಾಧ್ಯಕ್ಷೆ ಮಲ್ಲವ್ವ ಬಿಚ್ಚೂರ, ಗದಗ ತಾ.ಪಂ. ಸದಸ್ಯೆ ಮುಮ್ತಾಜ್ ಬಿ ನದಾಫ್, ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ, ಜಿ.ಪಂ. ಸಿ.ಇ.ಓ ಡಾ. ಆನಂದ್ ಕೆ , ಜಿಲ್ಲಾ ಪೊಲೀಸ ವರಿಷ್ಟಾಧಿಕಾರಿ ಶ್ರೀನಾಥ ಜೋಶಿ, ಪ್ರಾಚಾರ್ಯ ಶ್ರೀನಿವಾಸ ದೇಶಪಾಂಡೆ, ಜಿಲ್ಲಾಸ್ಪತ್ರೆ ಸರ್ಜನ್ ಡಾ. ಬಿ.ಸಿ. ಕರಿಗೌಡರ, ವೈದ್ಯಕೀಯ ಅಧಿಕ್ಷಕ ಡಾ. ಪಲ್ಲೇದ, ಜಿ.ಎಸ್. . ಡಾ. ಬಿಜ್ಜಳ, ಮಹಿಳಾ ಮತ್ತು ಅಭಿವೃದ್ಧಿ ಉಪನಿರ್ದೇಶಕಿ ಅಕ್ಕಮಹಾದೇವಿ ಕೆ.ಎಚ್., ನಿರ್ಮಿತಿ ಕೇಂದ್ರದ ಯೋಜನಾ ವ್ಯವಸ್ಥಾಪಕ ಜಿ.ವಿ. ಶಿರೋಳ, ಜನಪ್ರತಿನಿಧಿಗಳು, ವಿವಿಧ ಇಲಾಖೆಯ ಹಿರಿಯ ಅಧಿಕಾರಿಗಳು ಜಿಲ್ಲಾಸ್ಪತ್ರೆ, ಜಿಮ್ಸ್ನ ಅಧಿಕಾರಿ, ಸಿಬ್ಬಂದಿಗಳು ಸಾರ್ವಜನಿಕರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 