ಕೆ.ಇ. ಬೋರ್ಡ್ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಒಕ್ಕೂಟ ಉದ್ಘಾಟನೆ
Inauguration of Student Union at K.E. Board Pre-University College
ಧಾರವಾಡ 11 : ಕೆ.ಇ. ಬೋರ್ಡ್ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಒಕ್ಕೂಟ, ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳ ಉದ್ಘಾಟನಾ ಸಮಾರಂಭವು ವಿಜೃಂಭಣೆಯಿಂದ ನಡೆಯಿತು. ಕಾರ್ಯಕ್ರಮವು ಭಾರತ ಮಾತೆಗೆ ಪುಷ್ಪಾರ್ಚನೆ ಹಾಗೂ ಪ್ರಾರ್ಥನಾ ಗೀತೆಯೊಂದಿಗೆ ಆರಂಭವಾಯಿತು.ಮುಖ್ಯ ಅತಿಥಿಗಳಾಗಿ ಕ.ವಿ.ವಿ. ಸಿಂಡಿಕೇಟ್ ಸದಸ್ಯರಾದ ಶ್ಯಾಮ ಮಲ್ಲನಗೌಡರ್, ಕಾಲೇಜಿನ ಪ್ರಾಚಾರ್ಯ ಪ್ರೊ. ಎಂ. ಎ. ಸಿದ್ಧಾಂತಿ ಹಾಗೂ ಕಾರ್ಯಾಧ್ಯಕ್ಷೆ ಡಾ. ಸುನೀತಾ ಪರೋಹಿತ್ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಶ್ರೀಮತಿ ಅನುರಾಧಾ ಹುಯಿಲಗೋಳ ಅತಿಥಿಗಳನ್ನು ಪರಿಚಯಿಸಿದರು. ಜ್ಯೋತಿ ಕಡೆಮನಿ ಸ್ವಾಗತಿಸಿದರು. ಶ್ರೀಮತಿ ಲಕ್ಷ್ಮೀ ಏಣಗಿ ಪ್ರಾಸ್ತಾವಿಕ ನುಡಿ ಸಲ್ಲಿಸಿದರು. ಮುಖ್ಯ ಅತಿಥಿಗಳು ಶಿಕ್ಷಣ, ಶಿಸ್ತು, ಆರೋಗ್ಯ ಹಾಗೂ ಉತ್ತಮ ಜೀವನ ಮೌಲ್ಯಗಳ ಕುರಿತು ವಿದ್ಯಾರ್ಥಿಗಳಿಗೆ ಪ್ರೇರಣಾದಾಯಕ ಸಂದೇಶ ನೀಡಿದರು. ಆನಂದ ಎಲಿಗಾರ ಅವರು ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು.ಪ್ರಶಾಂತ ಪೀಸೆ ವಂದನಾರೆ್ಣ ಸಲ್ಲಿಸಿದರು. ಶಂಕ್ರಮ್ಮ ಅವರು ಕಾರ್ಯಕ್ರಮವನ್ನು ನಿರೂಪಿಸಿದರು. ಕಾರ್ಯಕ್ರಮದಲ್ಲಿ ಪ್ರೊ. ಮಂಜುನಾಥ ಜಿ., ಗೌತಮಿ ಬೋಸಲೆ ಹಾಗೂ ಕಾಲೇಜಿನ ಎಲ್ಲಾ ಉಪನ್ಯಾಸಕ ವೃಂದ ಉಪಸ್ಥಿತರಿದ್ದರು.
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು 