ರಾಷ್ಟ್ರೀಯ ಸೇವಾ ಯೋಜನೆ ಘಟಕದ ಉದ್ಘಾಟನೆ
Inauguration of the National Service Project Unit
ಲೋಕದರ್ಶನ ವರದಿ
ಧಾರವಾಡ ೨೭: ಶಾಲೆಯ ಪ್ರತಿಯೊಬ್ಬ ಮಕ್ಕಳು ರಾಷ್ಟ್ರೀಯ ಸೇವಾ ಯೋಜನೆಯಲ್ಲಿ ತಮ್ಮನ್ನು ತೊಡಗಿಸುವ ಮೂಲಕ ಸಮಾಜ ಸೇವೆಯನ್ನು ಕಲಿತು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ಟಾಟಾ ಮೋಟರ್ಸ್ ಧಾರವಾಡ ಘಟಕದ ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥ ಶ್ರೀ ಶೆಟ್ಟಿ ಹೇಳಿದರು.
ಕಮಲಾಪುರದ ಸರ್ಕಾರಿ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಘಟಕವನ್ನು ಸಸಿಗೆ ನೀರು ಹಾಕುವ ಮೂಲಕ ಉದ್ಘಾಟಿಸಿ ಮಾತನಾಡಿದರು.
ಇದೇ ಸಂಧರ್ಭದಲ್ಲಿ ಟಾಟಾ ಮೋಟಾರ್ಸ್ ಕಂಪನಿ ವತಿಯಿಂದ ಶಾಲಾ ಮಕ್ಕಳಿಗೆ ಅಗ್ನಿ ಅವಘಡಗಳು ಸಂಭವಿಸಿದಾಗ ಹೇಗೆ ಬೆಂಕಿಯನ್ನು ನಂದಿಸಬೇಕೆAದು ಹಾಗೂ ಮುಂಜಾಗ್ರತೆಯಾಗಿ ಕೈಕೊಳ್ಳಬೇಕಾದ ಕ್ರಮಗಳ ಕುರಿತು ಪ್ರಾಯೋಗಿಕ ಪ್ರಾತ್ಯಕ್ಷಿಕೆಯನ್ನು ನೀಡಲಾಯಿತು. ಇದರ ಜೊತೆಗೆ ಮಕ್ಕಳಿಂದ ಬೆಂಕಿಯನ್ನು ಹೇಗೆ ನಂದಿಸಬೇಕೆAದು ಎಂಬುದರ ಕುರಿತು ಪ್ರಾತ್ಯಕ್ಷಿಕೆ ಮಾಡಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಮುಖ್ಯೋಪಾಧ್ಯಾಯರಾದ ರಮೇಶ್ ಯರಳಿ ಮಾತನಾಡಿ "ಮಕ್ಕಳು ತಮ್ಮ ವಿದ್ಯಾಭ್ಯಾಸದೊಂದಿಗೆ ಸಮಾಜ ಸೇವೆ ಮತ್ತು ಸಮಾಜದಲ್ಲಿ ಉತ್ತಮ ಪ್ರಜೆಯಾಗಿ ಗುರುತಿಸಿಕೊಳ್ಳಬೇಕೆಂದು" ಸಲಹೆ ನೀಡಿದರು.
ಶಾಲೆಯ ರಾಷ್ಟ್ರೀಯ ಸೇವಾ ಯೋಜನೆಯ ಘಟಕದ ಕಾರ್ಯಕ್ರಮ ಅಧಿಕಾರಿ ಎ. ಎಫ್. ಅಂಕಲಗಿ ಯೋಜನೆಯ ಕುರಿತು ಸಂಕ್ಷಿಪ್ತವಾಗಿ ಮಾತನಾಡಿದರು.
ಟಾಟಾ ಮೋಟಾರ್ಸ್ ಘಟಕದ ಮಾನವ ಸಂಪನ್ಮೂಲ ವಿಭಾಗದ ಅಧಿಕಾರಿಗಳು ಹಾಗೂ ಸಿಬ್ಬಂದಿ ಮತ್ತು ಶಾಲೆಯ ಸಿಬ್ಬಂದಿಯಾದ ಜಾಕೀರ್ ಹುಸೇನ ಮುಲ್ಲಾ, ರಾಜು ನಾಯಕ, ಶಿವಾನಂದ ಬಾಗೋಡಿ, ಕೆ. ಎಸ್. ಪಾಟೀಲ, ವಾರೀಜಾಕ್ಷಿ ಭಟ್, ವರ್ಷಾ ಪವಾರ, ಮಂಜುಳಾ ಬಡಿಗೇರ ಮುಂತಾದವರು ಉಪಸ್ಥಿತರಿದ್ದರು. ಆರ್. ಜಿ. ನಾಯಕ ಸ್ವಾಗತಿಸಿ, ಕೊನೆಯಲ್ಲಿ ವಂದಿಸಿದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 