ಪೆ.6 ರಂದು ನೂತನ ದೇವಸ್ಥಾನ ಉದ್ಘಾಟನೆ
ಲೋಕದರ್ಶನ ವರದಿ
ಬ್ಯಾಡಗಿ16: ಪಟ್ಟಣದ ಕದರಮಂಡಲಗಿ ರಸ್ತೆಯಲ್ಲಿರುವ ಶಬರಿ ನಗರದಲ್ಲಿ ನೂತನವಾಗಿ ನಿರ್ಮಿಸಿರುವ ಅಯ್ಯಪ್ಪ ಸ್ವಾಮಿ, ಗಣಪತಿ ಹಾಗೂಅನ್ನಪೂರ್ಣೆಶ್ವರಿ ದೇವಿಯ ದೇವಸ್ಥಾನಗಳ ಉದ್ಘಾಟನೆಯು ಫೆಬ್ರುವರಿ ತಿಂಗಳ 6 ಮತ್ತು 7 ರಂದು ಜರುಗಲಿದೆ ಎಂದು ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿಯ ಗೌರವಾಧ್ಯಕ್ಷ ಜಯಣ್ಣ ಶಿರೂರು ಹೇಳಿದರು.
ಅಯ್ಯಪ್ಪ ಸ್ವಾಮಿಯ ದೇವಸ್ಥಾನದ ಆವರಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು ದಿ. 6 ರಂದು ಮೂರೂ ದೇವರುಗಳ ಮೆರವಣಿಗೆಯು ಬಹು ವಿಜೃಂಭಣೆಯಿಂದ ನಡೆಯಲಿದೆ. ದಿ. 7 ರಂದು ಹೋಮ, ಕಳಸಾರೋಹಣ ಹಅಾಗೂ ದೇವರ ಮೂರ್ತಿ ಗಳಿಗೆ ಪ್ರಾಣ ಪ್ರತಿಷ್ಠಾಪನೆ ಜರುಗಲಿದೆ ಎಂದು ತಿಳಿಸಿದರು.
ಸಭೆಯಲ್ಲಿ ದೇವಸ್ಥಾನದ ಅಭಿವೃದ್ಧಿ ಹಾಗೂ ಕಾರ್ಯಕ್ರಮಗಳ ಅನುಷ್ಠಾನ ಕುರಿತು ಚರ್ಚೆಸಲಾಯಿತು. ಈ ಸಂದರ್ಭದಲ್ಲಿ ಸಮಿತಿ ಅಧ್ಯಕ್ಷ ಮೋಹನ ಕತ್ತಿ, ಉಪಾಧ್ಯಕ್ಷ ಸುರೇಶಗೌಡ ಪಾಟೀಲ, ರಾಜು ಮೊರಗೇರಿ, ಬಸಣ್ಣ ಕಡೇಕೂಪ್ಪ, ಮಾಲತೇಶ ಅರಳಿಮಟ್ಟಿ, ವೆಂಕಟೇಶ, ಎಸ್.ಜಿ. ಮಂಜಣ್ಣ, ಎಸ್.ಎಸ್. ಹಿರೇಮಠ, ರಾಮಾಂಜನೇಯ, ಸುರೇಶ ಡಂಬಳ, ರಾಜು ಗೊಂದಿಮಲ್ಲ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 