ಪೆ.6 ರಂದು ನೂತನ ದೇವಸ್ಥಾನ ಉದ್ಘಾಟನೆ
ಲೋಕದರ್ಶನ ವರದಿ
ಬ್ಯಾಡಗಿ16: ಪಟ್ಟಣದ ಕದರಮಂಡಲಗಿ ರಸ್ತೆಯಲ್ಲಿರುವ ಶಬರಿ ನಗರದಲ್ಲಿ ನೂತನವಾಗಿ ನಿರ್ಮಿಸಿರುವ ಅಯ್ಯಪ್ಪ ಸ್ವಾಮಿ, ಗಣಪತಿ ಹಾಗೂಅನ್ನಪೂರ್ಣೆಶ್ವರಿ ದೇವಿಯ ದೇವಸ್ಥಾನಗಳ ಉದ್ಘಾಟನೆಯು ಫೆಬ್ರುವರಿ ತಿಂಗಳ 6 ಮತ್ತು 7 ರಂದು ಜರುಗಲಿದೆ ಎಂದು ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿಯ ಗೌರವಾಧ್ಯಕ್ಷ ಜಯಣ್ಣ ಶಿರೂರು ಹೇಳಿದರು.
ಅಯ್ಯಪ್ಪ ಸ್ವಾಮಿಯ ದೇವಸ್ಥಾನದ ಆವರಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು ದಿ. 6 ರಂದು ಮೂರೂ ದೇವರುಗಳ ಮೆರವಣಿಗೆಯು ಬಹು ವಿಜೃಂಭಣೆಯಿಂದ ನಡೆಯಲಿದೆ. ದಿ. 7 ರಂದು ಹೋಮ, ಕಳಸಾರೋಹಣ ಹಅಾಗೂ ದೇವರ ಮೂರ್ತಿ ಗಳಿಗೆ ಪ್ರಾಣ ಪ್ರತಿಷ್ಠಾಪನೆ ಜರುಗಲಿದೆ ಎಂದು ತಿಳಿಸಿದರು.
ಸಭೆಯಲ್ಲಿ ದೇವಸ್ಥಾನದ ಅಭಿವೃದ್ಧಿ ಹಾಗೂ ಕಾರ್ಯಕ್ರಮಗಳ ಅನುಷ್ಠಾನ ಕುರಿತು ಚರ್ಚೆಸಲಾಯಿತು. ಈ ಸಂದರ್ಭದಲ್ಲಿ ಸಮಿತಿ ಅಧ್ಯಕ್ಷ ಮೋಹನ ಕತ್ತಿ, ಉಪಾಧ್ಯಕ್ಷ ಸುರೇಶಗೌಡ ಪಾಟೀಲ, ರಾಜು ಮೊರಗೇರಿ, ಬಸಣ್ಣ ಕಡೇಕೂಪ್ಪ, ಮಾಲತೇಶ ಅರಳಿಮಟ್ಟಿ, ವೆಂಕಟೇಶ, ಎಸ್.ಜಿ. ಮಂಜಣ್ಣ, ಎಸ್.ಎಸ್. ಹಿರೇಮಠ, ರಾಮಾಂಜನೇಯ, ಸುರೇಶ ಡಂಬಳ, ರಾಜು ಗೊಂದಿಮಲ್ಲ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 