ವಿಜಯಪುರದಲ್ಲಿ ಹೆಚ್ಚಿದ ಕರೋನ ಸೋಂಕು : 200 ಜನರ ಸ್ಥಳಾಂತರ
ವಿಜಯಪುರ
, ಏ 19, ವಿಜಯಪುರ ಜಿಲ್ಲೆಯಲ್ಲಿ ಕರೋನ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಒಂದೇ
ಬಡಾವಣೆಯಲ್ಲಿ 20 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ.ಹೀಗಾಗಿ ಮುನ್ನೆಚ್ಚರಿಕಾ
ಕ್ರಮವಾಗಿ 200ಕ್ಕೂ ಅಧಿಕ ಜನರನ್ನು ಬೇರೆಡೆ ಸ್ಥಳಾಂತರ ಮಾಡಲಾಗಿದೆ. ರಾಜ್ಯಾದ್ಯಂತ
ಮಾರಕ ಕೊರೊನಾ ಸೋಂಕು ತಲ್ಲಣ ಸೃಷ್ಟಿಸಿದ್ದು, ಸೋಂಕಿತರ ಸಂಖ್ಯೆ ಈವರೆಗೆ 388ಕ್ಕೆ
ಏರಿಕೆಯಾಗಿದೆ. ವಿಜಯಪುರದ ಒಂದೇ ಪ್ರದೇಶದ 5 ಕುಟುಂಬಗಳಿಗೆ ಕೊರೋನಾ ಸೋಂಕು
ತಗುಲಿದೆ . ಹೀಗಾಗಿ ಈ 5 ಕುಟುಂಬಗಳ ಸಂಬಂಧಿಕರು, ಸೇರಿ 20ಕ್ಕೂ ಅಧಿಕ ಕುಟುಂಬಗಳನ್ನು
ಕ್ವಾರೆಂಟೈನ್ ಗೆ ಒಳಪಡಿಸಲಾಗಿದೆ
ಸರ್ಕಾರಿ ಬಸ್ಗಳಲ್ಲಿ 20 ಜನರನ್ನು ಸ್ಥಳಾಂತರ
ಮಾಡಲಾಗಿದೆ. ಕೊರೋನಾ ಪೀಡಿತರ ಸಂಪರ್ಕದಲ್ಲಿದ್ದ ಪ್ರೈಮರಿ ಹಾಗೂ ಸೆಕಂಡರಿ
ಸಂಪರ್ಕದಲ್ಲಿರುವವರನ್ನು ಗುರುತಿಸಿ ಕ್ವಾರಂಟೈನ್ ಮಾಡಲಾಗಿದೆ. ಇನ್ನು ಈ ಪ್ರದೇಶದ
ಸುತ್ತಮುತ್ತಲಿನ ಸುಮಾರು ಒಂದು ಸಾವಿರ ಜನರ ಗಂಟಲು ದ್ರವ ಪರೀಕ್ಷೆ ಮಾಡಲು ವಿಜಯಪುರ
ಜಿಲ್ಲಾಡಳಿತ ಮುಂದಾಗಿದೆ. ಈ ಮೂಲಕ ಕೊರೋನಾ ಸೋಂಕು ಹರಡದಂತೆ ಕ್ರಮ ಕೈಗೊಳ್ಳಲಾಗಿದೆ.
ಕೊರೊನಾ ಪೀಡಿತರ ಸಂಖ್ಯೆ ಹೆಚ್ಚಾಗಿರುವ ಕಾರಣ ವಿಜಯಪುರ ಜಿಲ್ಲಾಡಳಿತ ಚಪ್ಪರಬಂದ್ ಕಾಲನಿ
ಸೇರಿದಂತೆ ಗೋಳಗುಮ್ಮಟ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿನ ಕೆಲವು ಪ್ರದೇಶಗಳನ್ನು ಸೀಲ್
ಡೌನ್ ಮಾಡಲಾಗಿದೆ .
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 