ವಿವಿಧ ಬೇಡಿಕೆ ಈಡೇರಿಕೆಗಾಗಿ ಗ್ರಾಮ ಆಡಳಿತಾಧಿಕಾರಿಗಳ ಅನಿರ್ಧಿಷ್ಟಾವಧಿ ಮುಷ್ಕರ
Indefinite strike of village administrators for fulfillment of various demands
ಕಾಗವಾಡ 10: ತಾಲೂಕಿನ ಗ್ರಾಮ ಆಡಳಿತಾಧಿಕಾರಿಗಳು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ, ತಾಲೂಕಾ ದಂಡಾಧಿಕಾರಿಗಳ ಕಚೇರಿ ಆವರಣದಲ್ಲಿ ಸೋಮವಾರ ದಿ.10 ರಿಂದ ಅನಿರ್ಧಿಷ್ಟಾವಧಿ ಮುಷ್ಕರ ಪ್ರಾರಂಭಿಸಿದ್ದಾರೆ.
ಗ್ರಾಮ ಆಡಳಿತಾಧಿಕಾರಿಗಳ ಜಿಲ್ಲಾ ಸಂಘದ ಪದಾಧಿಕಾರಿ ಕೆ.ಕೆ. ಕುಲಕರ್ಣಿ ಮಾತನಾಡಿ, ನಾವು ನಮ್ಮ ಬೇಡಿಕೆಗಳಿಗೆ ಆಗ್ರಹಿಸಿ, ಕಳೆದ ಬಾರಿ ಮುಷ್ಕರ ನಡೆಸಿದಾಗ ಸರ್ಕಾರ ನಮ್ಮ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದಾಗ ಮುಷ್ಕರ ಹಿಂಪಡೆದಿದ್ದೇವು. ಈಗ ಎರಡು ತಿಂಗಳು ಕಳೆದರೂ ಕೂಡಾ ನಮ್ಮ ಬೇಡಿಕೆಗಳು ಈಡೇರಲಿಲ್ಲವಾದ್ದರಿಂದ ಈಗ ಮತ್ತೆ ಕಚೇರಿಯ ಕಾರ್ಯಗಳನ್ನು ಸ್ಥಗಿತಗೊಳಿಸಿ, ನಮ್ಮ ಬೇಡಿಕೆಗಳಾದ ಮೂಲಭೂತ ಸೌಕರ್ಯ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ, ಮುಷ್ಕರ ಪ್ರಾರಂಭಿಸಿದ್ದೇವೆ ಎಂದು ಹೇಳಿದರು.
ತಾಲೂಕಾ ಸಂಘದ ಅಧ್ಯಕ್ಷ ಪ್ರಕಾಶ ಪುಠಾಣಿ, ಗೌರವಾಧ್ಯಕ್ಷ ಸುಭಾಷ ಬಶೆಟ್ಟಿ, ಉಪಾಧ್ಯಕ್ಷ ಶೌಕತಅಲಿ ನಾಲತವಾಡ, ಪ್ರಧಾನ ಕಾರ್ಯದರ್ಶಿ ಪರಾಗ ಕಾಂಬಳೆ ಸೇರಿದಂತೆ ತಾಲೂಕಿನ ಎಲ್ಲ ಗ್ರಾಮಗಳ ಗ್ರಾಮ ಆಡಳಿತಾಧಿಕಾರಿಗಳು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 