ವಿವಿಧ ಬೇಡಿಕೆ ಈಡೇರಿಕೆಗಾಗಿ ಗ್ರಾಮ ಆಡಳಿತಾಧಿಕಾರಿಗಳ ಅನಿರ್ಧಿಷ್ಟಾವಧಿ ಮುಷ್ಕರ
Indefinite strike of village administrators for fulfillment of various demands
ಕಾಗವಾಡ 10: ತಾಲೂಕಿನ ಗ್ರಾಮ ಆಡಳಿತಾಧಿಕಾರಿಗಳು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ, ತಾಲೂಕಾ ದಂಡಾಧಿಕಾರಿಗಳ ಕಚೇರಿ ಆವರಣದಲ್ಲಿ ಸೋಮವಾರ ದಿ.10 ರಿಂದ ಅನಿರ್ಧಿಷ್ಟಾವಧಿ ಮುಷ್ಕರ ಪ್ರಾರಂಭಿಸಿದ್ದಾರೆ.
ಗ್ರಾಮ ಆಡಳಿತಾಧಿಕಾರಿಗಳ ಜಿಲ್ಲಾ ಸಂಘದ ಪದಾಧಿಕಾರಿ ಕೆ.ಕೆ. ಕುಲಕರ್ಣಿ ಮಾತನಾಡಿ, ನಾವು ನಮ್ಮ ಬೇಡಿಕೆಗಳಿಗೆ ಆಗ್ರಹಿಸಿ, ಕಳೆದ ಬಾರಿ ಮುಷ್ಕರ ನಡೆಸಿದಾಗ ಸರ್ಕಾರ ನಮ್ಮ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದಾಗ ಮುಷ್ಕರ ಹಿಂಪಡೆದಿದ್ದೇವು. ಈಗ ಎರಡು ತಿಂಗಳು ಕಳೆದರೂ ಕೂಡಾ ನಮ್ಮ ಬೇಡಿಕೆಗಳು ಈಡೇರಲಿಲ್ಲವಾದ್ದರಿಂದ ಈಗ ಮತ್ತೆ ಕಚೇರಿಯ ಕಾರ್ಯಗಳನ್ನು ಸ್ಥಗಿತಗೊಳಿಸಿ, ನಮ್ಮ ಬೇಡಿಕೆಗಳಾದ ಮೂಲಭೂತ ಸೌಕರ್ಯ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ, ಮುಷ್ಕರ ಪ್ರಾರಂಭಿಸಿದ್ದೇವೆ ಎಂದು ಹೇಳಿದರು.
ತಾಲೂಕಾ ಸಂಘದ ಅಧ್ಯಕ್ಷ ಪ್ರಕಾಶ ಪುಠಾಣಿ, ಗೌರವಾಧ್ಯಕ್ಷ ಸುಭಾಷ ಬಶೆಟ್ಟಿ, ಉಪಾಧ್ಯಕ್ಷ ಶೌಕತಅಲಿ ನಾಲತವಾಡ, ಪ್ರಧಾನ ಕಾರ್ಯದರ್ಶಿ ಪರಾಗ ಕಾಂಬಳೆ ಸೇರಿದಂತೆ ತಾಲೂಕಿನ ಎಲ್ಲ ಗ್ರಾಮಗಳ ಗ್ರಾಮ ಆಡಳಿತಾಧಿಕಾರಿಗಳು ಉಪಸ್ಥಿತರಿದ್ದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 