ಭಾರತ, ಚೈನಾ ನಡುವಣ ಮಾತುಕತೆ ಬಹಿರಂಗವಾಗಲಿ: ಒವೈಸಿ ಆಗ್ರಹ
ಹೈದರಾಬಾದ್, ಜೂನ್ ೮, ಭಾರತ ಸೇನಾ ಪ್ರತಿನಿಧಿಗಳು, ಚೈನಾ ಪ್ರತಿನಿಧಿಗಳ ನಡುವೆ ನಡೆದ ಮಾತುಕತೆಯಲ್ಲಿ ಏನು ಚರ್ಚೆ ನಡೆದಿದೆ ಎಂಬುದನ್ನು ದೇಶದ ಜನರು ತಿಳಿದುಕೊಳ್ಳಲು ಅದನ್ನು ಬಹಿರಂಗಪಡಿಸಬೇಕು ಎಂದು ಸಂಸದ, ಎಂ ಐ ಎಂ ಅಧ್ಯಕ್ಷ ಅಸದುದ್ದೀನ್ ಒವೈಸಿ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.ಈ ವಿಷಯದಲ್ಲಿ ಕೇಂದ್ರ ಸರ್ಕಾರ ಏಕೆ ? ಮೌನವಾಗಿದೆ ಎಂಬುದನ್ನೂ ಸಹ ದೇಶದ ಜನರಿಗೆ ತಿಳಿಸಬೇಕು ಎಂದು ಅವರು ಹೇಳಿದ್ದಾರೆ. ಲಡಾಖ್ ನಲ್ಲಿ ಭಾರತದ ಭೂ ಭಾಗವನ್ನು ಚೈನಾ ಸೇನೆ ಅತಿಕ್ರಮಿಸಿದೆಯೋ, ಇಲ್ಲವೋ ಎಂಬುದನ್ನು ಕೇಂದ್ರ ಸರ್ಕಾರ ಮೊದಲು ಸ್ಪಷ್ಟಪಡಿಸಬೇಕು ಎಂದು ಒವೈಸಿ ಒತ್ತಾಯಿಸಿದ್ದಾರೆ.ಲಡಾಖ್ ಗಡಿಯಲ್ಲಿರುವ ನಿಯಂತ್ರಣ ರೇಖೆ ಬಳಿ ಭಾರತ, ಚೈನಾ ಗಡಿ ವಿವಾದ ಸೃಷ್ಟಿಯಾಗಿದೆ, ವಿವಾದ ಪರಿಹರಿಸಲು ಉಭಯ ದೇಶಗಳ ಸೇನಾ ಮಟ್ಟದ ಅಧಿಕಾರಿಗಳು ಮಾತುಕತೆ ನಡೆಸಿದ್ದಾರೆ.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 