ಭಾರತ, ಚೈನಾ ನಡುವಣ ಮಾತುಕತೆ ಬಹಿರಂಗವಾಗಲಿ: ಒವೈಸಿ ಆಗ್ರಹ
ಹೈದರಾಬಾದ್, ಜೂನ್ ೮, ಭಾರತ ಸೇನಾ ಪ್ರತಿನಿಧಿಗಳು, ಚೈನಾ ಪ್ರತಿನಿಧಿಗಳ ನಡುವೆ ನಡೆದ ಮಾತುಕತೆಯಲ್ಲಿ ಏನು ಚರ್ಚೆ ನಡೆದಿದೆ ಎಂಬುದನ್ನು ದೇಶದ ಜನರು ತಿಳಿದುಕೊಳ್ಳಲು ಅದನ್ನು ಬಹಿರಂಗಪಡಿಸಬೇಕು ಎಂದು ಸಂಸದ, ಎಂ ಐ ಎಂ ಅಧ್ಯಕ್ಷ ಅಸದುದ್ದೀನ್ ಒವೈಸಿ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.ಈ ವಿಷಯದಲ್ಲಿ ಕೇಂದ್ರ ಸರ್ಕಾರ ಏಕೆ ? ಮೌನವಾಗಿದೆ ಎಂಬುದನ್ನೂ ಸಹ ದೇಶದ ಜನರಿಗೆ ತಿಳಿಸಬೇಕು ಎಂದು ಅವರು ಹೇಳಿದ್ದಾರೆ. ಲಡಾಖ್ ನಲ್ಲಿ ಭಾರತದ ಭೂ ಭಾಗವನ್ನು ಚೈನಾ ಸೇನೆ ಅತಿಕ್ರಮಿಸಿದೆಯೋ, ಇಲ್ಲವೋ ಎಂಬುದನ್ನು ಕೇಂದ್ರ ಸರ್ಕಾರ ಮೊದಲು ಸ್ಪಷ್ಟಪಡಿಸಬೇಕು ಎಂದು ಒವೈಸಿ ಒತ್ತಾಯಿಸಿದ್ದಾರೆ.ಲಡಾಖ್ ಗಡಿಯಲ್ಲಿರುವ ನಿಯಂತ್ರಣ ರೇಖೆ ಬಳಿ ಭಾರತ, ಚೈನಾ ಗಡಿ ವಿವಾದ ಸೃಷ್ಟಿಯಾಗಿದೆ, ವಿವಾದ ಪರಿಹರಿಸಲು ಉಭಯ ದೇಶಗಳ ಸೇನಾ ಮಟ್ಟದ ಅಧಿಕಾರಿಗಳು ಮಾತುಕತೆ ನಡೆಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 