ಭಾರತ-ನೇಪಾಳ ಜಂಟಿ ಆಯೋಗದ ಸಭೆ: ಡಾ ಎಸ್ ಜೈಶಂಕರ್ ಭಾಗಿ
ಕಠ್ಮಂಡು, ಆ 21 ಭಾರತ-ನೇಪಾಳದ ಐದನೇ ಜಂಟಿ ಆಯೋಗದ ಸಭೆಯಲ್ಲಿ ಪಾಲ್ಗೊಳ್ಳುವ ಸಲುವಾಗಿ ವಿದೇಶಾಂಗ ಸಚಿವ ಎಸ್ ಜೈಶಂಕರ್ ಬುಧವಾರ ಕಠ್ಮಂಡು ತಲುಪಿದ್ದು, ನೇಪಾಳದ ವಿದೇಶಾಂಗ ಕಾರ್ಯದಶರ್ಿ ಶಂಕರ್ ದಾಸ್ ಬೈರಾಗಿ ಮತ್ತು ನೇಪಾಳದಲ್ಲಿನ ಭಾರತದ ರಾಯಭಾರಿ ನೀಲಾಂಬರ್ ಆಚಾರ್ಯ ಬರಮಾಡಿಕೊಂಡರು. ನೇಪಾಳದ ವಿದೇಶಾಂಗ ಸಚಿವ ಪ್ರದೀಪ್ ಕುಮಾರ್ ಗಯಾವಲಿ ಮತ್ತು ಡಾ.ಜೈಶಂಕರ್ ಅವರು ಸಭೆಯ ಸಹ -ಅಧ್ಯಕ್ಷತೆ ವಹಿಸಲಿದ್ದು, ದ್ವಿಪಕ್ಷೀಯ ಸಂಬಂಧದ ಕುರಿತು ಉಭಯ ಮುಖಂಡರೂ ಚರ್ಚಿಸಲಿದ್ದಾರೆ ಎಂದು ಕಠ್ಮಂಡುವಿನಲ್ಲಿರುವ ಭಾರತೀಯ ರಾಯಭಾರ ಕಚೇರಿ ತಿಳಿಸಿದೆ. ಭಾರತ-ನೇಪಾಳ ಆಯೋಗ 1987ರ ಜೂನ್ ತಿಂಗಳಲ್ಲಿ ಸ್ಥಾಪನೆಯಾಯಿತು. ಇದರ ಸಭೆಗಳು ಒಮ್ಮೆ ಭಾರತದಲ್ಲಿ ಹಾಗೂ ಮತ್ತೊಮ್ಮೆ ನೇಪಾಳದಲ್ಲಿ ನಡೆಯುತ್ತದೆ ಕಳೆದ ಸಭೆಯನ್ನು 2016ರ ಅಕ್ಟೋಬರ್ ನಲ್ಲಿ ನವದೆಹಲಿಯಲ್ಲಿ ಆಯೋಜಿಸಲಾಗಿತ್ತು. ಭಾರತ-ನೇಪಾಳ ಆಯೋಗದ ಸಭೆಯ ನಡುವೆ ನೇಪಾಳ ಅಧ್ಯಕ್ಷೆ ಬಿದ್ಯಾ ದೇವಿ ಭಂಡಾರಿ ಮತ್ತು ಪ್ರಧಾನಿ ಕೆ ಪಿ ಶರ್ಮಾ ಒಲಿಯವರನ್ನು ಎಸ್ ಜೈಶಂಕರ್ ಭೇಟಿಯಾಗುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 