ಭಾರತ-ಪಾಕಿಸ್ತಾನ ಕದನ ವಿರಾಮ: ಆದಮ್ಪುರ ವಾಯುನೆಲೆಗೆ ಭೇಟಿ ನೀಡಿದ ಪ್ರಧಾನಮಂತ್ರಿ ನರೇಂದ್ರ ಮೋದಿ
India-Pakistan ceasefire: Prime Minister Narendra Modi visits Adampur air base
ನವದೆಹಲಿ 13: ಭಾರತ-ಪಾಕಿಸ್ತಾನ ಕದನ ವಿರಾಮ ಘೋಷಣೆಯಾದ ಬೆನ್ನಲ್ಲೇ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಂಗಳವಾರ ಪಂಜಾಬ್ನ ಆದಮ್ಪುರ ವಾಯುನೆಲೆಗೆ ಭೇಟಿ ನೀಡಿದ್ದು, ಯೋಧರೊಂದಿಗೆ ಮಾತುಕತೆ ನಡೆಸಿದ್ದಾರೆ.
ಈ ವೇಳೆ ಯೋಧರು ಸದ್ಯದ ಸ್ಥಿತಿಯ ಬಗ್ಗೆ ವಿವರಿಸಿದರು.
ಭೇಟಿಯ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಯೋಧರೊಂದಿಗಿನ ಫೋಟೊಗಳನ್ನು ಮೋದಿ ಹಂಚಿಕೊಂಡಿದ್ದಾರೆ.
‘ಇಂದು ಬೆಳಿಗ್ಗೆ, ನಾನು ಆದಮ್ಪುರಕ್ಕೆ ಹೋಗಿ ನಮ್ಮ ವೀರ ಯೋಧರನ್ನು ಭೇಟಿಯಾದೆ. ಧೈರ್ಯ, ದೃಢನಿಶ್ಚಯ ಮತ್ತು ನಿರ್ಭಯತೆಯನ್ನು ಸಾರುವವರೊಂದಿಗೆ ಇರುವುದು ಬಹಳ ವಿಶೇಷ ಅನುಭವವಾಗಿತ್ತು. ನಮ್ಮ ಸಶಸ್ತ್ರ ಪಡೆಗಳು ಭಾರತಕ್ಕಾಗಿ ಮಾಡುವ ಪ್ರತಿ ಕೆಲಸಕ್ಕೂ ಇಡೀ ದೇಶ ಕೃತಜ್ಞವಾಗಿರುತ್ತದೆ’ ಎಂದು ಮೋದಿ ಬರೆದುಕೊಂಡಿದ್ದಾರೆ.
ಪಂಜಾಬ್ ನ ಆದಂಪುರ್ ಭಾರತೀಯ ವಾಯುಪಡೆ ನೆಲೆಯ ರನ್ ವೇಯನ್ನು ಧ್ವಂಸಗೊಳಿಸಿದ್ದೇವೆ ಎಂಬ ಪಾಕ್ ಆರೋಪ ಸುಳ್ಳು ಎಂಬುದು ಬಯಲಾಗಿದೆ. ಆದಂಪುರ್ ನೆಲೆಯಲ್ಲಿರುವ ಯುದ್ಧ ವಿಮಾನಗಳನ್ನು ಹಾಗೂ ರಾಡಾರ್ ನೆಲೆಯನ್ನು ಧ್ವಂಸಗೊಳಿಸಿರುವುದಾಗಿ ಪಾಕ್ ತಿಳಿಸಿತ್ತು. ಅಷ್ಟೇ ಅಲ್ಲ ತಮ್ಮ ದಾಳಿಯಲ್ಲಿ 60 ಮಂದಿ ಭಾರತೀಯ ಸೈನಿಕರು ಸಾವ*ನ್ನಪ್ಪಿರುವುದಾಗಿ ಹೇಳಿತ್ತು. ಆದರೆ ಈ ಎಲ್ಲಾ ಮಾಹಿತಿಯು ಸುಳ್ಳು ಎಂಬುದು ಜಗತ್ತಿಗೆ ಗೊತ್ತಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಯೋಧರ ಜತೆಗಿನ ಚರ್ಚೆ ವೇಳೆ ತಿಳಿಸಿದ್ದಾರೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 