ಮುಂಬೈ 06: ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಘರ್ಷದಿಂದ ದೇಶದ ಆರ್ಥಿಕತೆಗೆ ಯಾವುದೇ ಪೆಟ್ಟುಬಿದ್ದಿಲ್ಲ ಎಂದು ಶುಕ್ರವಾರ ಆರ್ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ಹೇಳಿದ್ದಾರೆ.
ಈ ಸಂಘರ್ಷವು ಆರ್ಥಿಕತೆಯ ಮೇಲೆ ಅತಿ ಕಡಿಮೆ ಪ್ರಮಾಣದ ಪರಿಣಾಮವನ್ನಷ್ಟೇ ಉಂಟುಮಾಡಿದೆ. ಉತ್ತರ ಭಾರತದ ಹಲವೆಡೆ ವಿಮಾನಯಾನ ಕುಂಟಿತಗೊಂಡಿದ್ದರಿಂದ ಕೆಲವು ದಿನಗಳ ಕಾಲ ಆರ್ಥಿಕತೆಯ ಮೇಲೆ ಅದರ ಹೊಡೆತ ಬಿದ್ದಿತ್ತು, ಆದರೆ ಅದರಿಂದ ಯಾವುದೇ ದೊಡ್ಡ ಪ್ರಮಾಣದ ನಷ್ಟವಾಗಿಲ್ಲ ಎಂದರು.
ಸಂಘರ್ಷದ ತೀವ್ರತೆಯಿದ್ದ ಕೆಲವು ದಿನಗಳ ಕಾಲ ಆ ಪ್ರದೇಶಗಳಲ್ಲಿ ಬೆಲೆ ಏರಿಕೆಯಾಗಿತ್ತಾದರೂ, ಇದೀಗ ಪರಿಸ್ಥಿತಿ ಮತ್ತೆ ಮೊದಲಿನಂತಾಗಿದೆ.