ಬ್ರುಸೆಲ್ಸ್ನಲ್ಲಿ ಭಾರತ-ಐರೋಪ್ಯ ಒಕ್ಕೂಟದ ಶೃಂಗಸಭೆ
ನವದೆಹಲಿ, ಡಿ 23, ಮುಂದಿನ ವರ್ಷ ಭಾರತ-ಐರೋಪ್ಯ ಒಕ್ಕೂಟದ ಶೃಂಗಸಭೆಯನ್ನು ಬ್ರುಸೆಲ್ಸ್ನಲ್ಲಿ ನಡೆಸಲು ನಿರ್ಧರಿಸಲಾಗಿದೆ. ಯುರೋಪಿಯನ್ ಕೌನ್ಸಿಲ್ ಅಧ್ಯಕ್ಷ ಚಾರ್ಲ್ಸ್ ಮೈಕೆಲ್ ಪ್ರಧಾನಿ ನರೇಂದ್ರ ಮೋದಿಯವರ ಜೊತೆ ಮಾತನಾಡಿದ ಸಮಯದಲ್ಲಿ ಈ ತೀರ್ಮಾನಕ್ಕೆ ಬರಲಾಗಿದೆ. ಪ್ರಧಾನ ಮಂತ್ರಿಯ ಅಧಿಕೃತ ವೆಬ್ಸೈಟ್ ಪ್ರಕಾರ ಯುರೋಪಿಯನ್ ಕೌನ್ಸಿಲ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದಕ್ಕಾಗಿ ಮೋದಿ ಅವರು ಮೈಕೆಲ್ ಅವರನ್ನು ಅಭಿನಂದಿಸಿ, ಯಶಸ್ಸು ಸಾಧಿಸುವಂತೆಯೂ ಶುಭ ಹಾರೈಸಿದ್ದಾರೆ. ಮೈಕೆಲ್ ನೇತೃತ್ವದಲ್ಲಿ ಭಾರತ- ಐರೋಪ್ಯ ಒಕ್ಕೂಟ ಸಹಭಾಗಿತ್ವವನ್ನು ಇನ್ನಷ್ಟು ಬಲಪಡಿಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ವರ್ಷ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಹೊರತಾಗಿ ನ್ಯೂಯಾರ್ಕ್ನಲ್ಲಿ ತಮ್ಮ ಭೇಟಿಯನ್ನು ನೆನಪಿಸಿಕೊಂಡ ಮೋದಿ, ದ್ವಿಪಕ್ಷೀಯ ವ್ಯಾಪಾರ ಮತ್ತು ಹೂಡಿಕೆ ಒಪ್ಪಂದ (ಬಿಟಿಐಎ), ಸಂಪರ್ಕ ಪಾಲುದಾರಿಕೆ, ಯುರೋಪಾಲ್, ಯುರೋಟಮ್, ಭಯೋತ್ಪಾದನೆ ನಿಗ್ರಹ ಮತ್ತು ಹವಾಮಾನ ಬದಲಾವಣೆ ಕುರಿತು ಶೃಂಗಸಭೆಯನ್ನು ಮುಂದಿನ ವರ್ಷ ಬ್ರಸೆಲ್ಸ್ನಲ್ಲಿ ನಡೆಯಲು ಇಬ್ಬರೂ ನಾಯಕರು ಸಮ್ಮತಿಸಿದ್ದಾರೆ.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 