ನರೇಗಾದಡಿ ಮಾಹಿತಿ ವಿನಿಮಯ ಜಾಗೃತಿ ಕಾರ್ಯಕ್ರಮ
Information exchange awareness program under NAREGA
ಕಾರವಾರ, ಸೆ.17:- ಹೊನ್ನಾವರ ತಾಲೂಕಿನ ಕೊಡಾಣಿ ಹಾಗೂ ಮಾಗೋಡ ಗ್ರಾಮ ಪಂಚಾಯತ್ ಗಳಲ್ಲಿ ನರೇಗಾ ಯೋಜನೆಯ ಕುರಿತಾದ ಮಾಹಿತಿ ನೀಡಲು ಹಾಗೂ ಕೂಲಿಕಾರರಿಗೆ ಉದ್ಯೋಗ ನೀಡುವ ಉದ್ದೇಶದಿಂದ ಮಂಗಳವಾರ ದುಡಿಯೋಣ ಬಾ ಅಭಿಯಾನ ಕೈಗೊಂಡು ಜಾಗೃತಿ ಮೂಡಿಸಲಾಯಿತು.
ದುಡಿಯೋಣ ಬಾ ಅಭಿಯಾನದಲ್ಲಿ ನರೇಗಾದಡಿ ಸಿಗುವ ಸೌಲತ್ತುಗಳು, ಕೂಲಿಕಾರರ ದಿನಗೂಲಿ ರೂ 370ಕ್ಕೆ ಏರಿಕೆಯಾಗಿರುವುದು, ಮಹಿಳಾ ಕೂಲಿಕಾರರ ಭಾಗವಹಿಸುವಿಕೆ ಹೆಚ್ಚಿಸುವುದು, ಕೆಲಸದಲ್ಲಿನ ವಿನಾಯಿತಿ, ಯೋಜನೆಯಡಿ ಸಿಗುವ ಸಹಾಯಧನದ ಬಳಕೆ, ಮಹಿಳೆಯರಿಗೆ ಇರುವ ಸೌಲತ್ತುಗಳು, ಎನ್ಎಮ್ಎಮ್ಎಸ್ ಹಾಜರಾತಿ ಇತ್ಯಾದಿ ವಿಷಯಗಳ ಕುರಿತು ತಾಂತ್ರಿಕ ಸಂಯೋಜಕ ಸುನೀಲ್ ಹಾಗೂ ಐಇಸಿ ಸಂಯೋಜಕಿ ಪೂರ್ಣಿಮಾ ಗೌಡ ಮಾಹಿತಿ ನೀಡಿದರು.
ನಂತರ ನರೇಗಾ ಯೋಜನೆಯ ಮಾಹಿತಿಯುಳ್ಳ ಕರಪತ್ರಗಳನ್ನು ನೀಡುವ ಮೂಲಕ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಪಡೆಯುವಂತೆ ಹಾಗೂ ಸಾರ್ವಜನಿಕ ಕಾಮಗಾರಿಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುವಂತೆ ಅರಿವು ಮೂಡಿಸಲಾಯಿತು.
ಈ ಸಂದರ್ಭದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಎಮ್ ಡಿ ಸಾದಿಕ್, ಎಮ್ ಕೆ ನಾಯ್ಕ, ಕೊಡಾಣಿ ಗ್ರಾಮ ಪಂಚಾಯತ ಅಧ್ಯಕ್ಷ ತಿಮ್ಮಪ್ಪ ನಾಯ್ಕ, ಗ್ರಾಮ ಪಂಚಾಯತ್ ಅಧಿಕಾರಿಗಳು ಸಿಬ್ಬಂದಿಗಳು ಇದ್ದರು.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 