ಬೀಜೋಪಚಾರ ಕುರಿತು ರೈತರಿಗೆ ಮಾಹಿತಿ ನೀಡಿದ: ಚಂದ್ರಕಾಂತ ಪವಾರ್
Informed farmers about seed treatment: Chandrakant Pawar
ಲೋಕದರ್ಶನ ವರದಿ
ಇಂಡಿ 26: ಬಿತ್ತನೆಗೆ ಮುಂಚಿತವಾಗಿ ಬೀಜಗಳಲ್ಲಿ ಬರನಿರೋಧಕತೆ ಹೆಚ್ಚಿಸಲು ಬೀಜೋಪಚಾರ ಅಗತ್ಯವಾಗಿದೆ ಎಂದು ಕೃಷಿ ಉಪ ನಿರ್ದೇಶಕ ಚಂದ್ರಕಾಂತ ಪವಾರ ಹೇಳಿದರು.ಅವರು ನಗರದ ರೈತ ಸಂಪರ್ಕ ಕೇಂದ್ರದಲ್ಲಿ ಜರುಗಿದ ಬೀಜೋಪಚಾರ ಅಂದೋಲನದಲ್ಲಿ ಪ್ರಾತಕ್ಷತೆಯೊಂದಿಗೆ ರೈತರಿಗೆ ಮಾಹಿತಿ ನೀಡಿ ಮಾತನಾಡಿದರು.ಬಿತ್ತನೆಗೆ ಮುಂಚೆ ಬೀಜಗಳನ್ನು ಶೇ 2 ರ ಕ್ಯಾಲ್ಸಿಯಂ ಕ್ಲೋರೈಡ ದ್ರಾವಣದಲ್ಲಿ ಒಂದು ಗಂಟೆ ನೆನಸಿ ನಂತರ ನೆರಳಿನಲ್ಲಿ ಕನಿಷ್ಠ 7 ಗಂಟೆ ಒಣಗಿಸಬೇಕು.
ನಂತರ ಪ್ರತಿ ಕೆಜಿ ಬಿತ್ತನೆ ಬೀಜಕ್ಕೆ 3 ಗ್ರಾಂ. ಶೀಲೀಂಧ್ರ ಮಿಶ್ರಣವಾದ ಕಾರ್ಬೇಡೈಜಿಯಂ ಶೇ 12 ಹಾಗೂ ಮ್ಯಾಂಕೋಜೇಬ ಶೇ 64 ಅಥವಾ 10 ಗ್ರಾಂ ಜೈವಿಕ ಗೊಬ್ಬರಗಳಾದ ಳ್ಲ್ಘ್ಪಿಪಿ್ಯೂಳ್ಘ್ಲ್ಕ ಪಿಎಸ್ಬಿ ಹಾಗೂ ರೈಜೋಬಿಯಂಗಳಿಂದ ಬೀಜೋಪಚಾರ ಮಾಡಬೇಕು ಎಂದರು.ಕೃಷಿ ಅಧಿಕಾರಿ ಮಹಾಂತೇಶ ಶೆಟ್ಟೆಣ್ಣವರ ಮಾತನಾಡಿದರು.ಸಹಾಯಕ ಕೃಷಿ ನಿರ್ದೇಶಕ ಮಹಾದೇವಪ್ಪ ಏವೂರ, ಮನೋಜ ಪತ್ತಾರ, ಸವಿತಾ ಬಿರಾದಾರ, ಶ್ರೀಕಾಂತ ಚವ್ಹಾಣ, ಪ್ರಗತಿಪರ ರೈತರಾದ ಮಲ್ಲು ಗುಡ್ಲ, ಕೃಷಿ ಸಖಿಗಳು, ಅನುಗಾರರ ಸೇರಿದಂತೆ ರೈತರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 