ಸೋತವರಿಗೆ ಸಚಿವ ಸ್ಥಾನ ನೀಡಿದರೆ ಹೈದರಾಬಾದ್ ಭಾಗಕ್ಕೆ ಅನ್ಯಾಯ: ರಾಜುಗೌಡ
ಬೆಂಗಳೂರು, ಫೆ. 3 : ಚುನಾವಣೆಯಲ್ಲಿ ಸೋತವರಿಗೆ ಸಚಿವ ಸ್ಥಾನ ನೀಡುವ ಸುದ್ದಿಗಳು ಬರುತ್ತಿವೆ. ಸೋತವರಿಗೆ ಸಚಿವ ಸ್ಥಾನ ನೀಡಿದರೆ ಹೈದರಾಬಾದ್ ಭಾಗಕ್ಕೆ ಅನ್ಯಾಯ ಮಾಡಿದಂತಾಗುತ್ತದೆ ಎಂದು ಬಿಜೆಪಿ ಶಾಸಕ ರಾಜುಗೌಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಶಾಸಕರ ಭವನದಲ್ಲಿ ಮಾತನಾಡಿದ ಅವರು, ಹೈದರಾಬಾದ್ ಕರ್ನಾಟಕ ಬಹಳ ಹಿಂದುಳಿದ ಪ್ರದೇಶ. ಈ ಭಾಗದಲ್ಲಿ ಆಡಳಿತಕ್ಕೆ ಬಂದಿದ್ದ ಕಾಂಗ್ರೆಸ್, ಜೆಡಿಎಸ್ ಸರ್ಕಾರ ಕೆಲಸ ಮಾಡಿದೆ. ಈಗ ಬಿಜೆಪಿ ಸರ್ಕಾರ ಹೈದರಾಬಾದ್ ಕರ್ನಾಟಕಕ್ಕೆ ಒತ್ತು ಕೊಟ್ಟು ಈ ಭಾಗದವರಿಗೆ ಸಚಿವ ಸ್ಥಾನ ನೀಡಬೇಕು. ಹೈದರಾಬಾದ್ ಭಾಗಕ್ಕೆ ಒಂದು ಆದ್ಯತೆ ನೀಡುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಮಾಡುತ್ತೇನೆ ಎಂದರು.
ಸಂಪುಟ ವಿಸ್ತರಣೆ ಸ್ಥಾನಮಾನ ಸಂಬಂಧ ಭಾಗದ ನಾಯಕರೆಲ್ಲ ಸೇರಿ ಸಭೆ ಮಾಡಿದ್ದೇವೆ. ನಾಳೆಯೂ ಸಭೆ ನಡೆಸಿ ತೀರ್ಮಾನ ಮಾಡಿ ಬಳಿಕ ಮುಖ್ಯಮಂತ್ರಿ ಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸುತ್ತೇವೆ ಎಂದರು.
ತಾವು ಪಕ್ಷ ವಿರೋಧಿ ಚಟುವಟಿಕೆ ಮಾಡುತ್ತಿಲ್ಲ. ಸೋತ ಸಿ.ಪಿ.ಯೋಗೇಶ್ವರ್ ಸೇರಿದಂತೆ ಕೆಲವರಿಗೆ ಮಂತ್ರಿಮಂಡಲದಲ್ಲಿ ಸೇರ್ಪಡೆ ಆದರೆ ಸೋತವರಿಗೆ ಸಚಿವ ಸ್ಥಾನ ನೀಡುವುದು ಅನ್ಯಾಯ ಎಂದು ಖಂಡಿಸುತ್ತೇನೆ ಎಂದು ರಾಜುಗೌಡ ಹೇಳಿದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 